ನವದೆಹಲಿ: ಕೊರೋನವೈರಸ್ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲು ಸಾಧ್ಯವಾದಷ್ಟು ಮನೆಯೊಳಗೆ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಲ್ಲಾ ಭಾರತೀಯರಿಗೆ ಮನವಿ ಮಾಡಿದ್ದಾರೆ. ಜಗತ್ತು ಎಂದೂ ಕಂಡರಿಯದ ಗಂಭೀರ ಅಪಾಯವನ್ನು ಈಗ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಒಟ್ಟು 173 ಸಕಾರಾತ್ಮಕ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್ -19 ಸವಾಲನ್ನು ಎದುರಿಸುವ ಕುರಿತುರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಮಾತ್ರವಲ್ಲ, ‘ಚೈತ್ರ ನವರಾತ್ರಿ’ ಸಂದರ್ಭದಲ್ಲಿ ಪ್ರಧಾನಿ ಜನರಿಗೆ ಒಂಬತ್ತು ಮನವಿಗಳನ್ನು ಮಾಡಿದರು.
ಅದೆಂದರೆ..
1) ಪ್ರತಿ ಭಾರತೀಯರೂ ಜಾಗರೂಕರಾಗಿರಬೇಕು. ಮನೆಗಳಿಂದ ಹೊರಗುಳಿಯುವುದನ್ನು ತಪ್ಪಿಸಿಕೊಳ್ಳಬೇಕು.
2) 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಮನೆಗಳ ಒಳಗಡೆಯೇ ಇರಬೇಕು.
3) 2020 ರ ಮಾರ್ಚ್ 22 ರ ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನತಾ ಕರ್ಫ್ಯೂ ಅನ್ನು ಕರ್ತವ್ಯದಂತೆ ಆಚರಿಸಿ.
4) 2020 ರ ಮಾರ್ಚ್ 22 ರಂದು ಜನತಾ ಕರ್ಫ್ಯೂ ದಿನ ಸಂಜೆ 5 ಗಂಟೆಗೆ, ಮನೆಯ ಬಾಲ್ಕನಿ, ಬಾಗಿಲಿನ ಮುಂದೆ ನಿಂತು ಭಾರತವನ್ನು ಆರೋಗ್ಯವಾಗಿಡಲು ದಿನದ 24 ಗಂಟೆಯೂ ದುಡಿಯುತ್ತಿರುವ (ವೈದ್ಯರು, ದಾದಿಯರು, ಅರೆವೈದ್ಯರು, ಪುರಸಭೆಯ ಸಿಬ್ಬಂದಿ, ಸಶಸ್ತ್ರ ಪಡೆ, ವಿಮಾನ ನಿಲ್ದಾಣದ ಸಿಬ್ಬಂದಿ ) ಜನರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿ.
5) ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಹೋಗುವುದನ್ನು ತಪ್ಪಿಸಿ. ಮುಂದೂಡಬಹುದಾದ ಶಸ್ತ್ರಚಿಕಿತ್ಸೆಗಳಿದ್ದರೆ, ಅದನ್ನು ಮುಂದೂಡಿ.
6) ಆರ್ಥಿಕತೆಯನ್ನು ಹೆಚ್ಚಿಸುವ ಮಾರ್ಗಗಳನ್ನು ಸಮಗ್ರವಾಗಿ ನೋಡಲು ಹಣಕಾಸು ಸಚಿವರ ನೇತೃತ್ವದಲ್ಲಿ COVID-19 ಆರ್ಥಿಕ ಪ್ರತಿಕ್ರಿಯೆ ಕಾರ್ಯಪಡೆಯ ರಚನೆ.
7) ನಿಮ್ಮ ಮನೆಗಳಲ್ಲಿ ಕೆಲಸ ಮಾಡುವವರು, ಸಹಾಯಕ ಸಿಬ್ಬಂದಿ ಮತ್ತು ಚಾಲಕರು, ತೋಟಗಾರರ ವೇತನವನ್ನು ಕಡಿತಗೊಳಿಸಬೇಡಿ.
8) ಆತಂಕದಿಂದ ಹೆಚ್ಚು ಹೆಚ್ಚು ಖರೀದಿಯಲ್ಲಿ ಪಾಲ್ಗೊಳ್ಳಬೇಡಿ. ಭಾರತದಲ್ಲಿ ಸಾಕಷ್ಟು ಆಹಾರ ಮತ್ತು ಪಡಿತರ ಸರಬರಾಜು ಇದೆ.
9) ವದಂತಿಗಳಿಂದ ದೂರವಿರಿ.
ಪ್ರತಿಯೊಬ್ಬರೂ ಈ ಐದು ಅಂಶಗಳನ್ನು ಪಾಲಿಸಬೇಕು ಎಂದು ಪ್ರಧಾನಿ ಜನತೆಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.