ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಸ್ವಯಂಸೇವಕರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ.
ನಿನ್ನೆ ರೇಡಿಯೋ ಜಾಕಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ” ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು, ಪೊಲೀಸರು ಕೂಡ ಕಠಿಣ ಶಸ್ತ್ರ ಬಳಕೆಯ ಕ್ರಮಗಳಿಂದ ದೂರವಿರಬೇಕು. ಶಿಸ್ತನ್ನು ಪಾಲಿಸುವುದು ಕೂಡ ಈ ಸಂದರ್ಭದಲ್ಲಿ ಅತ್ಯವಶ್ಯಕವಾಗಿದೆ” ಎಂದಿದ್ದಾರೆ.
ಸಾರ್ವಜನಿಕ ಪ್ರಸಾರಕರು ಅದರಲ್ಲೂ ಆಲ್ ಇಂಡಿಯಾ ರೇಡಿಯೋ ವದಂತಿಗಳನ್ನು ದೂರವಿರಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕಿದೆ ಎಂದು ಅವರು ಅಭಿಪ್ರಾಯಿಸಿದರು.
ಆರ್ಜೆಗಳು ವದಂತಿ ಮತ್ತು ಸುಳ್ಳು ಮಾಹಿತಿಗಳು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕು. ಮೂಢನಂಬಿಕೆಗಳನ್ನು ದೂರ ಮಾಡುವುದು ಮಾತ್ರವಲ್ಲದೆ ಜನರನ್ನು ಪ್ರೇರೇಪಿಸುವಲ್ಲಿ ಕೂಡ ಪಾತ್ರವನ್ನು ನಿಭಾಯಿಸಬೇಕು ಎಂದು ಮೋದಿ ಕರೆ ನೀಡಿದರು.
ಆರ್ಜೆಗಳು ಸಕಾರಾತ್ಮಕ ಕಥೆಗಳನ್ನು, ಕೇಸ್ ಸ್ಟಡಿಗಳನ್ನು ಪ್ರಸಾರಗೊಳಿಸಬೇಕು. ಅದರಲ್ಲೂ ಮುಖ್ಯವಾಗಿ ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದ ಗುಣಮುಖರಾದವರ ಬಗ್ಗೆ ಸುದ್ದಿಗಳನ್ನು ಬಿತ್ತರಿಸಬೇಕು ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.