ಮಂಗಳೂರು: ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ದಕ್ಷಿಣ ಕನ್ನಡದಲ್ಲಿಯೂ ತನ್ನ ಕರಿ ನೆರಳನ್ನು ಚೆಲ್ಲಿದೆ. 10 ತಿಂಗಳ ಹಸುಗೂಸು ಸೇರಿದಂತೆ ಇನ್ನೂ ಕೆಲವರಲ್ಲಿ ಸೋಂಕು ದೃಢಪಟ್ಟಿದೆ.
ಕೊರೋನಾ ವಿರುದ್ಧದ ಯುದ್ಧಕ್ಕೆ ದಕ್ಷಿಣ ಕನ್ನಡಕ್ಕೆ ಬೇಕಾದ ಅಗತ್ಯ ವೈದ್ಯಕೀಯ ನೆರವನ್ನು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸುಧಾಮೂರ್ತಿ ಅವರು ಕಳುಹಿಸಿ ಕೊಟ್ಟಿದ್ದಾರೆ. ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಸುಮಾರು ರೂ. 28 ಲಕ್ಷದ ಅಗತ್ಯ ವಸ್ತುಗಳನ್ನು ಒಳಗೊಂಡ ವೈದ್ಯಕೀಯ ಕಿಟ್ಗಳನ್ನು ಸುಧಾಮೂರ್ತಿ ನೀಡಿದ್ದಾರೆ.
ಈ ಕಿಟ್ ನಲ್ಲಿ ಅಗತ್ಯ ವಸ್ತುಗಳಾದ 165000 ಮಾಸ್ಕ್, 5000 ಬಾಟಲ್ ಸ್ಯಾನಿಟೈಸರ್ (500 ML), 85 ಗಾಗಲ್ಸ್ , 03 ಬ್ಲಾಕ್ ಸರ್ಜಿಕಲ್ ಗ್ಲೌಸ್, 50 ಕ್ಯಾಪ್ ಗಳು, 30 ಪೂರ್ತಿ ಕಾಲು ಮುಚ್ಚುವಂತ ವೈದ್ಯಕೀಯ ವಸ್ತುಗಳು, 2000 ಎನ್-95 ಮಾಸ್ಕ್ , 300 ಫಾಗ್ ಫ್ರೀ ಮಾಸ್ಕ್, 60 ವಿಶೇಷ ಮಾದರಿಯ ಸರ್ಜಿಕಲ್ ಗ್ಲೌಸ್ ಅನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸರಬರಾಜು ಮಾಡಿದ್ದಾರೆ.
ಈ ಹಿಂದೆಯೂ ಹಲವಾರು ಸಂದರ್ಭದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಿರುವ ಸುಧಾಮೂರ್ತಿ ಅವರು ಈಗ ಕೊರೋನಾಗೂ ಅಗತ್ಯ ವೈದ್ಯಕೀಯ ನೆರವನ್ನು ನೀಡುವ ಮೂಲಕ ಮಾದರಿಯಾಗಿದ್ದಾರೆ. ಆ ಮೂಲಕ ಡೆಡ್ಲಿ ಕೊರೊನಾ ವಿರುದ್ಧ ಹೋರಾಟಕ್ಕೆ ಸರ್ಕಾರ ಮತ್ತು ಆರೋಗ್ಯ ಇಲಾಖೆಗಳ ಜೊತೆ ತಾವಿರುವುದಾಗಿ ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.