ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಭಾರತೀಯ ನಾಗರಿಕರಿಗೆ ನೀಡಿದ ವಿಡಿಯೋ ಸಂದೇಶದಲ್ಲಿ, ಸಾಮಾಜಿಕ ಅಂತರದ ಭಾಗವಾಗಿ ಡಿಜಿಟಲ್ ಪಾವತಿ ವಿಧಾನವನ್ನು ಅನುಸರಿಸುವಂತೆ ಕರೆ ನೀಡಿದ್ದಾರೆ.
ಸಾಂಕ್ರಾಮಿಕ ರೋಗದ ಸಮುದಾಯ ಪ್ರಸರಣ ಹಂತಕ್ಕೆ ಭಾರತ ಶೀಘ್ರದಲ್ಲೇ ಪ್ರವೇಶಿಸಬಹುದೆಂಬ ಆತಂಕದ ನಡುವೆಯೇ ರಾಷ್ಟ್ರವ್ಯಾಪಿ ಕೋವಿಡ್-19 ಧನಾತ್ಮಕ ಪ್ರಕರಣಗಳು ಭಾನುವಾರ 1,100 ರ ಗಡಿ ದಾಟಿದೆ.
ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು, ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ, ಸಾಮಾಜಿಕ ಅಂತರವನ್ನು ಪ್ರತಿಪಾದಿಸಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು 21 ದಿನಗಳ ಲಾಕ್ಡೌನ್ ಅನ್ನು ಘೋಷಿಸಿದೆ. ಲಾಕ್ ಡೌನ್ ಅನ್ನು ಅನುಸರಿಸುವ ಮೂಲಕ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಸರ್ಕಾರ ನಿರಂತರವಾಗಿ ಸಾರ್ವಜನಿಕರಿಗೆ ಮನವಿ ಮಾಡಿದೆ.
ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಡಿಜಿಟಲ್ ಬ್ಯಾಂಕಿಂಗ್ ಸೇರಿದಂತೆ ಪ್ರತಿಯೊಂದು ಮುನ್ನೆಚ್ಚರಿಕೆಯ ಕ್ರಮಗಳನ್ನು ಬಳಸುವಂತೆ ಗವರ್ನರ್ ಶಕ್ತಿಕಾಂತ ದಾಸ್ ಸಾರ್ವಜನಿಕರನ್ನು ಮನವಿ ಮಾಡುವ ವಿಡಿಯೋವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಭಾನುವಾರ ಬಿಡುಗಡೆ ಮಾಡಿದೆ.
ವೀಡಿಯೊ ಸಂದೇಶದಲ್ಲಿ ಶಕ್ತಿಕಾಂತ ದಾಸ್, “ಕೊರೋನಾವೈರಸ್ ಹರಡುವುದರಿಂದ ನಾವು ತುಂಬಾ ಕಷ್ಟದ ಸಮಯವನ್ನು ಎದುರಿಸುತ್ತಿದ್ದೇವೆ. ಈ ಸಮಯದಲ್ಲಿ, ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದರು.
“ಕೊರೋನಾವೈರಸ್ನಿಂದ ನಮ್ಮನ್ನು ರಕ್ಷಿಸಿಕೊಳ್ಳುವ ಒಂದು ಪ್ರಮುಖ ಮಾರ್ಗವೆಂದರೆ ಡೆಬಿಟ್ ಕಾರ್ಡ್ಗಳು, ಕ್ರೆಡಿಟ್ ಕಾರ್ಡ್ಗಳು ಮತ್ತು ವಿವಿಧ ಮೊಬೈಲ್ ಅಪ್ಲಿಕೇಶನ್ಗಳು ಸೇರಿದಂತೆ ಎಲ್ಲಾ ರೀತಿಯ ಡಿಜಿಟಲ್ ಪಾವತಿಗಳನ್ನು ಬಳಸುವುದು. ಡಿಜಿಟಲ್ ಪಾವತಿಸಿ, ಸುರಕ್ಷಿತವಾಗಿರಿ” ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.