ನವದೆಹಲಿ: ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನವೈರಸ್ ಅನ್ನು ಭಾರತದಿಂದ ನಿರ್ಮೂಲನೆಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ 11 ಮಂದಿ ತಜ್ಞರ ತಂಡ ದಿನದ 24 ಗಂಟೆಯೂ ಅವಿರತವಾಗಿ ಪರಿಶ್ರಮ ಪಡುತ್ತಿದೆ.
ಕೊರೋನವೈರಸ್ ಇಸ್ ಬಗೆಗಿನ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಿಮಿಷದಿಂದ ನಿಮಿಷಕ್ಕೆ ಪರಿಶೀಲನೆಗಳನ್ನು ನಡೆಸುತ್ತಿದೆ ಈ ತಂಡ. ವಿಶ್ವದ ಎರಡನೇ ಅತಿದೊಡ್ಡ ಜನಸಂಖ್ಯೆಯ ದೇಶವಾದ ಭಾರತದಲ್ಲಿ ಸಾಂಕ್ರಾಮಿಕ ರೋಗವು ಹರಡದಂತೆ ತಡೆಗಟ್ಟುವುದು ಅತ್ಯಂತ ಅನಿವಾರ್ಯವಾಗಿದೆ. ಹೀಗಾಗಿ 21 ದಿನಗಳ ಕಾಲ ಲಾಕ್ ಡೌನ್ ಮಾಡುವ ಘೋಷಣೆ ಮಾಡುವುದರಿಂದ ಹಿಡಿದು ಪ್ರತಿಯೊಂದು ಕಾರ್ಯಗಳನ್ನು ಕೂಡ ಮೋದಿ ಮತ್ತು ಅವರ ತಂಡ ಅತ್ಯಂತ ಯೋಜನಾಬದ್ಧವಾಗಿ ಮಾಡುತ್ತಿದೆ.
ತಜ್ಞರ ಆಳವಾದ ಸಂಶೋಧನೆ ಮತ್ತು ಸಹಮತದ ಅಭಿಪ್ರಾಯದ ಆಧಾರದ ಮೇಲೆಯೇ ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾವೈರಸ್ ವಿರುದ್ಧದ ಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ.
ದೇಶದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ದಿನದಿಂದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕೆಲಸದ ಅವಧಿಯನ್ನು 17-18 ಗಂಟೆಗಳಿಗೆ ಹೆಚ್ಚಿಸಿಕೊಂಡಿದ್ದಾರೆ. ಬೆಳಗ್ಗೆ 3 ಗಂಟೆಯವರೆಗೂ ಅವರು ಕಾರ್ಯ ಮಾಡುತ್ತಿದ್ದಾರೆ.
“ಮಧ್ಯರಾತ್ರಿಯವರೆಗೂ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ರಚಿಸಲಾದ ತಂಡಗಳು ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನದ ಬಗ್ಗೆ ಪ್ರಧಾನಿಯವರು ಪರಿಶೀಲನೆಗಳನ್ನು ನಡೆಸುತ್ತಿರುತ್ತಾರೆ” ಎಂದು ಮೂಲಗಳು ತಿಳಿಸಿವೆ.
ತಮ್ಮ ಕಚೇರಿಯಲ್ಲಿ ಕುಣಿತ ವಿಡಿಯೋ ಕಾನ್ಫರೆನ್ಸ್ ಮಾಡುವುದರಿಂದ ಹಿಡಿದು, ನಿತ್ಯ ಸಂಪುಟ ಸಚಿವರನ್ನು ಭೇಟಿಯಾಗುವವರೆಗೆ ಮೋದಿ ಬಿಡುವಿಲ್ಲದಂತೆ ಶ್ರಮವಹಿಸುತ್ತಿದ್ದಾರೆ. ಪ್ರಸ್ತುತ ಕೊರೋನವೈರಸ್ಗೆ ಸಂಬಂಧಿಸಿದಂತೆ 11 ಮಂದಿ ತಜ್ಞರ ತಂಡ ಅವರಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದೆ. ಈ ತಂಡದಲ್ಲಿ ವೈದ್ಯರುಗಳು, ಜೈವಿಕ ವಿಜ್ಞಾನಿಗಳು ಸಾಂಕ್ರಾಮಿಕ ರೋಗದ ತಜ್ಞರುಗಳು, ಅರ್ಥಶಾಸ್ತ್ರಜ್ಞರುಗಳು ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.