ಬೆಂಗಳೂರು: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾವೈರಸ್ ಕಾಟ ರಾಜ್ಯವನ್ನೂ ಬಿಟ್ಟಿಲ್ಲ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೂ ನಿಟ್ಟುಸಿರು ಬಿಡುವ ಅಂಕಿ ಅಂಶವೊಂದನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿದವರ ಪ್ರಮಾಣ, ಸಾವಿಗೀಡಾದವರ ಸಂಖ್ಯೆಗಿಂತ ಹೆಚ್ಚಾಗಿದೆ ಎಂದು ತಿಳಿಸುವ ಮೂಲಕ ಹೊಸ ಭರವಸೆಯೊಂದನ್ನು ಮೂಡಿಸಿದೆ. ಚೇತರಿಕೆ ಕಂಡವರ ಪ್ರಮಾಣ 12.3% ರಷ್ಟಿದ್ದರೆ, ಸಾವಿನ ಪ್ರಮಾಣ 2.4% ದಷ್ಟಿದೆ ಎಂದು ತಿಳಿದು ಬಂದಿದೆ.
ಈ ವರೆಗೆ ರಾಜ್ಯದಲ್ಲಿ ಸುಮಾರು 163 ರಷ್ಟು ಸೋಂಕಿತರು ಕಂಡು ಬಂದಿದ್ದು, ನಾಲ್ವರು ಸಾವನ್ನಪ್ಪಿದ್ದರೆ, ಇಪ್ಪತ್ತರಷ್ಟು ಮಂದಿ ಗುಣಮುಖರಾಗಿ ಮನೆಗೆ ತೆರಳಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕರ್ನಾಟಕ ಕೊರೋನಾ ಸಾವಿನ ಮತ್ತು ಸೋಂಕಿನ ಸಂಖ್ಯೆಯಲ್ಲಿ 9 ನೇ ಸ್ಥಾನದಲ್ಲಿರುವುದಾಗಿ ತಿಳಿಸಿದ್ದಾರೆ.
ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮತ್ತು ಜುಬಿಲಿಯೆಂಟ್ ಕಾರ್ಖಾನೆ ಯ ಕಾರಣದಿಂದ ಸೋಂಕು ಹರಡುವಿಕೆಯ ಸಂಖ್ಯೆ ಹೆಚ್ಚಾಗಿದ್ದರೂ, ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ ಒಂಬತ್ತನೇ ಸ್ಥಾನಕ್ಕೆ ಹೋಗಿದೆ ಎಂದೂ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಕೋವಿಡ್-19 ವಾರ್ ರೂಂ ನ ಉಸ್ತುವಾರಿ ಮುನಿಶ್ ಮೌದ್ಗಿಲ್ ಅವರು ಸೋಂಕು ನಿಯಂತ್ರಣದಲ್ಲಿಡುವ ಮೂಲಕ ಸಾವಿನ ಸಂಖ್ಯೆ ಯನ್ನು ಮತ್ತಷ್ಟು ಕಡಿಮೆಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ. ಒಟ್ಟಾರೆಯಾಗಿ ಕೊರೋನಾ ಕಡಿವಾಣಕ್ಕೆ ಸರ್ಕಾರ ಎಲ್ಲಾ ಕ್ರಮಗಳನ್ನೂ ಕೈಗೊಂಡಿದ್ದು, ಆ ಮೂಲಕ ಜನರ ರಕ್ಷಣೆಗೆ ಪ್ರಯತ್ನಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.