ನವದೆಹಲಿ: ಕೃಷಿ ಮತ್ತು ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈಗಾಗಲೇ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿರುವ ಕೇಂದ್ರ ಗೃಹ ಸಚಿವಾಲಯ, ಈಗ ಬುಕ್ ಶಾಪ್ಗಳು ಮತ್ತು ಎಲೆಕ್ಟ್ರಾನಿಕ್ ಫ್ಯಾನ್ ಮೊದಲಾದ ಸಾಮಗ್ರಿಗಳ ಮಾರಾಟಕ್ಕೂ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಸಂಸ್ಥೆಗಳು, ಬಿತ್ತನೆ ಬೀಜ, ತೋಟಗಾರಿಕೆಗೆ ಸಂಬಂಧಿಸಿದ ಉತ್ಪನ್ನಗಳು, ಕೃಷಿ ಉತ್ಪನ್ನಗಳ ಆಮದು- ರಫ್ತು, ಜೇನು ಸಾಕಾಣೆ ರಫ್ತು ಮೊದಲಾದ ವಿಷಯಗಳಿಗೆ ವಿನಾಯಿತಿ ನೀಡಿದೆ. ರಾಜ್ಯ ಮತ್ತು ಅಂತರಾಜ್ಯ ವ್ಯವಹಾರಗಳಿಗೆ ಪೂರಕವಾಗುವಂತೆ ಲಾಕ್ಡೌನ್ ಕ್ರಮವನ್ನು ಸಡಿಲಗೊಳಿಸಿದೆ.
ಜೊತೆಗೆ ಬಂದರುಗಳಲ್ಲಿ ಕಾರ್ಯನಿರ್ವಹಿಸುವ ನೌಕಾ ಪಡೆಗಳ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದ್ದು, ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಸೋಂಕು ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ಅವರಿಗೆ ಸೈನ್ ಇನ್ ಮಾಡಲು ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವುದಾಗಿಯೂ ಮಾಹಿತಿ ನೀಡಿದೆ. ಸಿಬ್ಬಂದಿ ಕಳೆದ 28 ದಿನಗಳ ತಮ್ಮ ಟ್ರಾವೆಲ್ ಹಿಸ್ಟರಿ ಯನ್ನು ಹಡಗಿನ ಮಾಲೀಕರು ಅಥವಾ ರಿಕ್ರೂಟ್ಮೆಂಟ್ ಆಂಡ್ ಪ್ಲೇಸ್ಮೆಂಟ್ ಸೇವೆಗಳನ್ನು ನಡೆಸುವ ಅಧಿಕಾರಿಗಳಿಗೆ ಕಡ್ಡಾಯವಾಗಿ ನೀಡುವಂತೆ ಸೂಚಿಸಲಾಗಿದೆ. ಈ ಮೇಲ್ ಮೂಲಕವೂ ತಿಳಿಸಬಹುದು ಎಂಬುದಾಗಿ ಸಚಿವಾಲಯ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.