ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕವೂ ಹಲವು ಕಟ್ಟುನಿಟ್ಟಿನ ಕ್ರಮಗಳು ಮುಂದುವರಿಯುವ ನಿರೀಕ್ಷೆ ಇದೆ. ವೈರಸ್ ಪ್ರಸರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ನಿರ್ಬಂಧಗಳು ಮುಂದುವರೆಯುವುದು ಅತ್ಯವಶ್ಯಕವಾಗಿದೆ ಎಂದು ತಜ್ಞರು ಕೂಡ ಅಭಿಪ್ರಾಯಿಸಿದ್ದಾರೆ. ಈಗಾಗಲೇ ದೆಹಲಿ ಮೆಟ್ರೋ ಆಡಳಿತವು ಪ್ರಯಾಣಿಕ್ಕೆ ಸಂಬಂಧಿಸಿದಂತೆ ಹಲವಾರು ನಿಯಮಗಳನ್ನು ರೂಪಿಸುತ್ತಿದೆ.
ದೆಹಲಿ ಮೆಟ್ರೋ ಸೆಕ್ಯೂರಿಟಿ ಚೆಕ್ ಅನ್ನು ಬಿಗಿಗೊಳಿಸಿದೆ, ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ 169 ನಿಲ್ದಾಣಗಳಲ್ಲಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನ ಸೇರಿದಂತೆ ಚಲನವಲನಗಳನ್ನು ಗಮನಿಸಲು 12000 ಸಿಐಎಸ್ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಿದೆ.
ಪ್ರತಿನಿತ್ಯ ದೆಹಲಿ ಮೆಟ್ರೋದಲ್ಲಿ ಸುಮಾರು ಮೂರು ಮಿಲಿಯನ್ ಜನರು ಪ್ರಯಾಣ ಮಾಡುತ್ತಾರೆ. ಹೀಗಾಗಿ ಲಾಕ್ ಡೌನ್ ಮುಗಿದ ಬಳಿಕ ಕರೋನವೈರಸ್ ಸಾಂಕ್ರಾಮಿಕತೆಯ ಸವಾಲನ್ನು ಹಿಮ್ಮೆಟ್ಟಿಸಲು ಕಠಿಣಾತಿ ಕಠಿಣ ನಿಯಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ಇದೇ ಕಾರಣಕ್ಕಾಗಿ ದೆಹಲಿ ಮೆಟ್ರೋ ಆಡಳಿತ ಈಗಿನಿಂದಲೇ ಯೋಜನೆಗಳನ್ನು ರೂಪಿಸುವ ಕಾರ್ಯ ಮಾಡುತ್ತಿದೆ.
ಪ್ರಸ್ತುತ ದೇಶದಲ್ಲಿ ಒಂದು ತಿಂಗಳಿನಿಂದ ಲಾಕ್ ಡೌನ್ ಜಾರಿಯಲ್ಲಿದೆ. ಕೆಲವೊಂದು ಸಡಿಲಿಕೆಗಳನ್ನು ನೀಡಿದ್ದರೂ ಕೂಡ ಯಾವುದೇ ರೀತಿಯ ಸಾರಿಗೆ ಸಂಚಾರಗಳು ಇನ್ನೂ ಆರಂಭಗೊಂಡಿಲ್ಲ.
ಮೂಲಗಳ ಪ್ರಕಾರ ದೆಹಲಿ ಮೆಟ್ರೋದಲ್ಲಿ ಸಂಚರಿಸಬೇಕಾದರೆ, ಆರೋಗ್ಯ ಸೇತು ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.