ಬೆಂಗಳೂರು : ದೇಶಾದ್ಯಂತ ಲಾಕ್ಡೌನ್ ಕ್ರಮ ಜಾರಿಯಾಗಿ ಒಂದು ತಿಂಗಳು ಕಳೆದಿದೆ. ಕೊರೋನಾ ನಿಯಂತ್ರಣದಲ್ಲಿಡಲು ಕೈಗೊಳ್ಳಲಾದ ಈ ಕ್ರಮವನ್ನು ಮೇ 3 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ ಮೇ 3 ರ ವರೆಗೆ ಕೊರೋನಾ ನಿಯಂತ್ರಣದಲ್ಲಿರುವ ಹಸಿರು ಜಿಲ್ಲೆಗಳಲ್ಲಿ ಷರತ್ತು ಬದ್ಧ ಸಡಿಲಿಕೆ ಮಾಡಲಾಗಿದ್ದು ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ, ಕೊಡಗು ಮೊದಲಾದ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಕೊಂಚ ರಿಲೀಫ್ ನೀಡಲಾಗಿದೆ. ರಾಮನಗರಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಹೊರತುಪಡಿಸಿ, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮಾಲ್, ಮಲ್ಟಿ ಬ್ರಾಂಡ್ ಶಾಪ್ಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿಲ್ಲ. ಮದ್ಯ ಮಾರಾಟಕ್ಕೆ ಆವಕಾಶ ನೀಡಲಾಗಿಲ್ಲ.
ಆದರೆ ಈ ಲಾಕ್ಡೌನ್ ಸಡಿಲಿಕೆಗೆ ಸರ್ಕಾರ ಶರತ್ತು ವಿಧಿಸಿದ್ದು, ಕಾರ್ಖಾನೆಗಳು ಕೇವಲ 50% ಉದ್ಯೋಗಿಗಳಿಗೆ ಮಾತ್ರವೇ ಏಕಕಾಲಕ್ಕೆ ಕೆಲಸ ಮಾಡಲು ಅವಕಾಶ ನೀಡುವಂತೆ ತಿಳಿಸಿದೆ. ಅಲ್ಲದೆ ಮಾಸ್ಕ್ ಧರಿಸುವಂತೆಯೂ ಸೂಚಿಸಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆಯೂ ಆದೇಶ ನೀಡಿದ್ದು, ಎಲ್ಲಾ ನಿಯಂತ್ರಣ ಕ್ರಮಗಳನ್ನು ಸರಿಯಾಗಿ ಅಳವಡಿಸುವಂತೆ ಸೂಚಿಸಿದೆ.
ಇನ್ನು ರಾಜ್ಯದಲ್ಲಿ ರೆಡ್ ಝೋನ್ ಎಂದು ಗುರುತಿಸಲಾದ ಜಿಲ್ಲೆಗಳಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಲಾಗಿಲ್ಲ. ಮೇ 3 ರ ವರೆಗೆ ಲಾಕ್ಡೌನ್ನ ಎಲ್ಲಾ ನಿಯಮಗಳೂ ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಳಗಾಂ, ಮೈಸೂರು, ಬಾಗಲಕೋಟೆ, ಬೀದರ್, ಕಲ್ಬುರ್ಗಿ, ವಿಜಯಪುರಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಲಾಕ್ಡೌನ್ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡಗಳಲ್ಲಿ ಲಾಕ್ಡೌನ್ ಸಡಿಲಿಕೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ, ಈ ಹಿಂದೆ ಪರಿಷ್ಕರಿಸಲಾಗಿದ್ದ ಮಾರ್ಗಸೂಚಿಗಳನ್ನು ಇನ್ನಷ್ಟು ಪರಿಷ್ಕರಿಸಿ ಕೆಲವು ಜಿಲ್ಲೆಗಳಲ್ಲಿ ಮತ್ತಷ್ಟು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲೆ ಸೇರಿದಂತೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ಹಿಂದಿನ ಮಾರ್ಗಸೂಚಿಗಳು ಮುಂದುವರೆಯಲಿವೆ.@BSYBJP pic.twitter.com/xr1NXox6fE
— CM of Karnataka (@CMofKarnataka) April 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.