ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ, ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಕರೆ ನೀಡಿದ ಮರುದಿನವೇ ಭಾರತದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಕ್ಯಾಂಟೀನುಗಳಲ್ಲಿ ದೇಶೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುವ ನಿರ್ಧಾರವನ್ನು ಕೈಗೊಳ್ಳಲಾದೆ.
ಬುಧವಾರ ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಸಿಆರ್ಪಿಎಫ್ ಕ್ಯಾಂಟೀನುಗಳಲ್ಲಿ ಜೂನ್ 1 ರಿಂದ ಕೇವಲ ದೇಶೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಘೋಷಿಸಿದ್ದಾರೆ.
ಈ ನಿರ್ಧಾರದಿಂದಾಗಿ 10 ಲಕ್ಷ ಸಿಎಪಿಎಫ್ ಸಿಬ್ಬಂದಿಗಳ ಸುಮಾರು 50 ಲಕ್ಷ ಕುಟುಂಬ ಸದಸ್ಯರು ದೇಶಿಯ ಉತ್ಪನ್ನಗಳನ್ನೇ ಬಳಕೆ ಮಾಡುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
“ನಿನ್ನೆ ಗೌರವಾನ್ವಿತ ಪ್ರಧಾನ ಮಂತ್ರಿಗಳು ದೇಶವನ್ನು ಸ್ವಾವಲಂಬಿ ಮಾಡಲು ಮತ್ತು ಭಾರತೀಯ ಉತ್ಪನ್ನಗಳನ್ನು ಉಪಯೋಗ ಮಾಡಲು ಮನವಿ ಮಾಡಿದ್ದಾರೆ. ಇದು ನಿಶ್ಚಿತ ರೂಪದಲ್ಲಿ ಮುಂಬರುವ ದಿನಗಳಲ್ಲಿ ಭಾರತವನ್ನು ವಿಶ್ವದ ನೇತೃತ್ವ ವಹಿಸುವಂತೆ ಮಾಡಲಿದೆ” ಎಂದು ಶಾ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.