ನವದೆಹಲಿ: ಭಾರತಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ಬಲಿಷ್ಠ ಹಿಡಿತವಿದೆ, ಇದುವೇ ಇಂದು ಕೊರೋನಾವೈರಸ್ ವಿರುದ್ಧ ಹೋರಾಡಲು ಭಾರತಕ್ಕೆ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ಆಜ್ ತಕ್ ಇ-ಅಜೆಂಡಾವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿರುವ ಪ್ರಧಾನ ಅವರು, “ಜಗತ್ತಿನಾದ್ಯಂತ ಕಚ್ಚಾತೈಲ ಬೆಲೆಯಲ್ಲಿ ಕುಸಿತ ಕಂಡಿರುವುದು ಹೊಸ ಸವಾಲನ್ನು ನೀಡುತ್ತಿದೆ, ಆದರೆ ನೆರೆಹೊರೆಯ ದೇಶಗಳನ್ನು ಹೊಂದಿರುವ ಉತ್ತಮ ಬಾಂಧವ್ಯದ ಪರಿಣಾಮವಾಗಿ ಭಾರತವು ಈ ಬಿಕ್ಕಟ್ಟನ್ನು ನಿರ್ವಹಣೆ ಮಾಡುತ್ತಿದೆ ಎಂದಿದ್ದಾರೆ.
“ಸೌದಿ ಅರೇಬಿಯಾ, ಒಮನ್ ಮತ್ತು ಕತಾರ್ ದೇಶಗಳೊಂದಿಗಿನ ಭಾರತದ ಉತ್ತಮ ಸಂಬಂಧದ ಪರಿಣಾಮವಾಗಿ ದೇಶದ ಖರೀದಿ ವಿಧಾನವನ್ನು ತೃಪ್ತಿಗೊಳಿಸಲು ಸಾಧ್ಯವಾಯಿತು. ಇದರ ದೇಶಗಳಿಗೂ ಭಾರತಕ್ಕೆ ಸಹಾಯ ಮಾಡುವಂತೆ ಕೋರಲಾಗಿದೆ” ಎಂದಿದ್ದಾರೆ.
“ನಾವು ತೈಲ ಆಮದುಗಳನ್ನು ಹೆಚ್ಚಿಸುತ್ತಿದ್ದೇವೆ ಮತ್ತು ಈಗ ಡಿಸ್ಕೌಂಟ್ ಬೆಲೆಗೆ ತೈಲ ಖರೀದಿ ಮಾಡುತ್ತಿದ್ದೇವೆ. ಇದು ಭಾರತವು ಜಾಗತಿಕ ಮಾರುಕಟ್ಟೆಯಲ್ಲಿ ಬಲಿಷ್ಠ ಹಿಡಿತವನ್ನು ಹೊಂದಿದೆ ಎಂಬುದಕ್ಕೆ ಉದಾಹರಣೆ” ಎಂದಿದ್ದಾರೆ.
ಅಗತ್ಯ ಇರುವ ರಾಷ್ಟ್ರಗಳಿಗೆ ಪೂರೈಕಾ ಸರಪಳಿಯನ್ನು ನಿರ್ವಹಿಸಲು ಭಾರತಕ್ಕೆ ಸಾಮರ್ಥ್ಯವಿದೆ, ಆದರೆ ಭಾರತದ ಅಗತ್ಯವನ್ನು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದಿದ್ದಾರೆ.
ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲೂ ಭಾರತವು ಔಷಧಗಳನ್ನು ಮತ್ತು ಇತರ ವೈದ್ಯಕೀಯ ಪರಿಕರಗಳನ್ನು 120 ರಾಷ್ಟ್ರಗಳಿಗೆ ರಫ್ತು ಮಾಡಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.