ನವದೆಹಲಿ: ಅಂಫಾನ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿ ಇದುವರೆಗೆ ಅಪ್ಪಳಿಸಿದ ಅತ್ಯಂತ ಕೆಟ್ಟ ಚಂಡಮಾರುತಗಳಲ್ಲಿ ಒಂದು ಎಂದು ಹೇಳಲಾಗಿದೆ. ಇಂದು ಸಂಜೆ 4 ಮತ್ತು 6 ಗಂಟೆಗೆ ಇದು ಬಂಗಾಳವನ್ನು ಅಪ್ಪಳಿಸಲಿದೆ ಎಂದು ವರದಿಯಾಗಿದೆ.
ಅಂಫಾನ್ ಪ್ರಸ್ತುತ ಸೂಪರ್ ಸೈಕ್ಲೋನ್ನಿಂದ ದುರ್ಬಲಗೊಂಡು ತೀವ್ರಸ್ವರೂಪದ ಚಂಡಮಾರುತವಾಗಿ ಬದಲಾಗಿದೆ. ಇದರ ಪರಿಣಾಮವಾಗಿ ಒರಿಸ್ಸಾ ಮತ್ತು ಬಂಗಾಳಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಉಂಟಾಗಿದೆ.
ಭಾರತೀಯ ಕರಾವಳಿಯತ್ತ ಮುನ್ನುಗ್ಗುತ್ತಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 4 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಚಂಡಮಾರುತ ಅಪ್ಪಳಿಸುವ ಸಂದರ್ಭದಲ್ಲಿ ಭಾರಿ ಅನಾಹುತ ಸಂಭವಿಸಬಹುದೆಂದು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಪಶ್ಚಿಮ ಬಂಗಾಳದ ದಿಘ ಮತ್ತು ಬಾಂಗ್ಲಾದೇಶದ ಹತಿಯಾ ಐಸ್ಲ್ಯಾಂಡ್ ಅನ್ನು ಪ್ರವೇಶಿಸುವಾಗ ಇದು ಗಂಟೆಗೆ 185 ಕಿಲೋಮೀಟರ್ ವೇಗ ಪಡೆದುಕೊಂಡಿದೆ. ಹೀಗಾಗಿ ಅಲ್ಲಿನ 20 ಮಿಲಿಯನ್ ಜನರನ್ನು 12,000 ಶಿಬಿರಗಳಿಗೆ ಸ್ಥಳಾಂತರ ಮಾಡಲಾಗಿದೆ.
ದಾಖಲೆಗಳು ಆರಂಭಗೊಂಡ ಬಳಿಕ ಅಂಫಾನ್ ಎರಡನೇ ಅತಿದೊಡ್ಡ ಸೂಪರ್ ಸೈಕ್ಲೋನ್ ಎಂದು ಪರಿಗಣಿಸಲಾಗಿದೆ. ಭಾರತೀಯ ನೌಕಾಸೇನೆಯ ಪೂರ್ವ ಕರಾವಳಿಯಾದ್ಯಂತ ಹೈ ಅಲರ್ಟ್ ಅನ್ನು ಘೋಷಿಸಿದ್ದು, ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.