ನವದೆಹಲಿ: ದೇಶದಾದ್ಯಂತದ ಕರಕುಶಲಕರ್ಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಬೇಡಿಕೆಯನ್ನು ಪಡೆದುಕೊಳ್ಳುವ ಅವಕಾಶವನ್ನು ನೀಡುವ ಹುನರ್ ಹಾಥ್ ಸೆಪ್ಟೆಂಬರ್ 25 ರಿಂದ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ, ಸ್ಥಳೀಯ ವಸ್ತುಗಳಿಗೆ ಜಾಗತಿಕ ಮನ್ನಣೆಯನ್ನು ದೊರಕಿಸಿ ಕೊಡುವ ಸಲುವಾಗಿ ‘ಲೋಕಲ್ ಟು ಗ್ಲೋಬಲ್’ ಥೀಮ್ನೊಂದಿಗೆ ಹುನರ್ ಹಾಥ್ ಅನ್ನು ಆಯೋಜನೆಗೊಳಿಸಲಾಗುವುದು ಎಂದು ನಖ್ವಿ ಹೇಳಿದ್ದಾರೆ.
ಈ ಬಾರಿಯ ಹುನರ್ ಹಾಥ್ನಲ್ಲಿ ದೇಶದ ಮೂಲೆ ಮೂಲೆಯ ಭಾರಿ ಪ್ರಮಾಣದ ಕರಕುಶಲಕರ್ಮಿಗಳು ಭಾಗವಹಿಸುವ ಮತ್ತು ವೈಶಿಷ್ಟ ದಿಂದ ಕೂಡಿದ ಸ್ಥಳೀಯ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಇಂಡಿಯಾ ಗೇಟ್ ಸಮೀಪ ಹುನರ್ ಹಾಥ್ ಅನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಕಲಾವಿದರು ಮತ್ತು ಕರಕುಶಲಕರ್ಮಿಗಳನ್ನು ಅವರು ಪ್ರೋತ್ಸಾಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.