ಬೆಂಗಳೂರು: ಕೊರೋನಾ ಸಂಕಷ್ಟದಿಂದ ಸಮಸ್ಯೆ ಎದುರಿಸುತ್ತಿರುವ ಹೂ ಬೆಳೆಗಾರರಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿದ್ದ ಪರಿಹಾರ ಪ್ಯಾಕೇಜ್ ನೀಡುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.
ಅಧಿಕೃತ ಗೃಹ ಕಛೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಾಲನೆ ನೀಡಿದರು.
12735 ಹೆ. ಪ್ರದೇಶದಲ್ಲಿ ಹೂವಿನ ಬೆಳೆ ಬೆಳೆಯುತ್ತಿದ್ದ ರೈತರಿಗೆ ಕೊರೋನಾ ಲಾಕ್ಡೌನ್ ನಿಂದಾಗಿ ನಷ್ಟ ಉಂಟಾಗಿತ್ತು. ಜೊತೆಗೆ ಕುಟುಂಬ ನಿರ್ವಹಣೆಯೂ ಕಷ್ಟಸಾಧ್ಯವಾಗಿತ್ತು. ಇದನ್ನರಿತ ರಾಜ್ಯ ಸರ್ಕಾರ ಅವರಿಗೆ ಬೆಂಬಲ ನೀಡಲು ಪರಿಹಾರವಾಗಿ 31.83 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿತ್ತು. ಇದರ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸಚಿವರ ನೂರು ದಿನಗಳ ಸಾಧನೆಯ 64 ಪುಟಗಳುಳ್ಳ ಪುಸ್ತಕವನ್ನೂ ಮುಖ್ಯಮಂತ್ರಿ ಬಿಡುಗಡೆ ಮಾಡಿದರು.
ಈ ಪುಸ್ತಕದಲ್ಲಿ ಕೊರೋನಾ ಸಂದರ್ಭದಲ್ಲಿ ತರಕಾರಿ, ಹೂ, ಹಣ್ಣು, ರೇಷ್ಮೆ ಬೆಳಗಾರರಿಗೆ ಪೂರಕವಾಗಿ ತೆಗೆದುಕೊಳ್ಳಲಾದ ಪರಿಹಾರ ಕ್ರಮಗಳ ಬಗ್ಗೆ, ಪರಿಹಾರ ಕ್ರಮಗಳ ಕುರಿತು ಮಾಹಿತಿಗಳಿದ್ದು, ಸರ್ಕಾರ ನೀಡಿರುವ ಅನುದಾನಗಳ ಬಗೆಗೂ ಮಾಹಿತಿ ಇದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ನಾರಾಯಣ ಗೌಡ, ರೈತರಿಗೆ ಪರಿಹಾರ ನೀಡುವ ಕಾರ್ಯ ಇಂದಿನಿಂದಲೇ ಆರಂಭವಾಗಿದ್ದು, ಮುಂದಿನ 15-20 ದಿನಗಳಲ್ಲಿಯೇ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಆಗಲಿದೆ. ಇದಕ್ಕಾಗಿ ಶ್ರಮಿಸಿರುವ ಮುಖ್ಯಮಂತ್ರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕೊರೋನಾ ಪರಿಹಾರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿಯೂ ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ತೋಟಗಾರಿಕೆ, ಪೌರಾಡಳಿತ, ರೇಷ್ಮೆ ಸಚಿವ ಡಾ| ನಾರಾಯಣಗೌಡ, ಗೃಹ ಸಚಿವ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಕಂದಾಯ ಸಚಿವ ಆರ್ ಅಶೋಕ್ ಮತ್ತಿತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.