ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಕೊರೋನವೈರಸ್ ಕುರಿತು ಮಂತ್ರಿಗಳ ಗುಂಪು (GoM) ಸಭೆ ನಡೆಸಲಿದ್ದಾರೆ. ಸಭೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ದೇಶಾದ್ಯಂತ ಚಾಲ್ತಿಯಲ್ಲಿರುವ ಕೊರೋನವೈರಸ್ ಮತ್ತು ಅದರ ಹರಡುವಿಕೆಯನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಸಚಿವರು ಚರ್ಚಿಸುವ ನಿರೀಕ್ಷೆಯಿದೆ. ಆರೋಗ್ಯ ಸಚಿವಾಲಯದ ಪ್ರಕಾರ, 9,987 ಹೊಸ ಪ್ರಕರಣಗಳೊಂದಿಗೆ, ಭಾರತದ ಕೋವಿಡ್-19 ಪ್ರಕರಣಗಳು 266,598 ಕ್ಕೆ ತಲುಪಿದೆ. ಮಾರಕ ಸೋಂಕಿನಿಂದ ಒಂದೇ ದಿನದಲ್ಲಿ 331 ಜನರು ಸಾವನ್ನಪ್ಪಿದ್ದಾರೆ.
88,528 ದೃಢಪಡಿಸಿದ ಪ್ರಕರಣಗಳೊಂದಿಗೆ ಮಹಾರಾಷ್ಟ್ರವು ದೇಶದಲ್ಲಿ ಅತಿ ಹೆಚ್ಚು ಪೀಡಿತ ರಾಜ್ಯವಾಗಿದೆ. 33,229 ಪ್ರಕರಣಗಳೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದರೆ, 29,943 ಪ್ರಕರಣಗಳಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ.
ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 48.46 ರಷ್ಟಿದೆ. ಮಹಾರಾಷ್ಟ್ರದಲ್ಲಿ ಮಾತ್ರ ಈವರೆಗೆ 40,975 ರೋಗಿಗಳು ಚೇತರಿಸಿಕೊಂಡಿದ್ದಾರೆ.
ಯುಎಸ್, ಬ್ರೆಜಿಲ್, ರಷ್ಯಾ ಮತ್ತು ಯುಕೆ ನಂತರ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಭಾರತವು ಐದನೇ ಅತಿ ಹೆಚ್ಚು ಹಾನಿಗೊಳಗಾದ ರಾಷ್ಟ್ರವಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.