ನವದೆಹಲಿ: ಚೀನಾ ಪಡೆಗಳು ಭಾರತದ ಯಾವುದೇ ಭೂಭಾಗವನ್ನು ಆಕ್ರಮಿಸಿಕೊಂಡಿಲ್ಲ, ನಮ್ಮ ಯಾವುದೇ ಪೋಸ್ಟ್ ಅವರ ವಶದಲ್ಲಿ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸರ್ವ ಪಕ್ಷಗಳ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಭಾರತ-ಚೀನಾ ನಡುವೆ ಏರ್ಪಟ್ಟಿರುವ ಸಂಘರ್ಷದ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಪ್ರಧಾನಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ಸರ್ವಪಕ್ಷಗಳ ಸಭೆ ನಡೆದಿತ್ತು.
“ಅವರು ನಮ್ಮ ಗಡಿಯನ್ನು ಅತಿಕ್ರಮಿಸಿಕೊಂಡಿಲ್ಲ, ಅವರು ನಮ್ಮ ಯಾವುದೇ ಪೋಸ್ಟ್ ಅನ್ನು ವಶಕ್ಕೆ ಪಡೆದುಕೊಂಡಿಲ್ಲ. 20 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಭಾರತ ಮಾತೆಯನ್ನು ಕೆಣಕಲು ಪ್ರಯತ್ನಿಸಿದವರಿಗೆ ಪಾಠ ಕಲಿಸಲಾಗಿದೆ” ಎಂದಿದ್ದಾರೆ.
ಭಾರತದ ಶಕ್ತಿಯನ್ನು ಹೆಮ್ಮೆಯಿಂದ ಹೇಳಿಕೊಂಡ ಮೋದಿ, ಯಾರಿಗೂ ಒಂದೇ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ವರದಿಗಳು ತಿಳಿಸಿವೆ.
“ಇಂದು, ನಮ್ಮ ಭೂಮಿಯ ಒಂದು ಇಂಚಿನ ಮೇಲೂ ಯಾರೂ ಕಣ್ಣು ಹಾಕದಷ್ಟು ಸಾಮರ್ಥ್ಯವನ್ನು ನಾವು ಹೊಂದಿದ್ದೇವೆ. ಭಾರತದ ಸಶಸ್ತ್ರ ಪಡೆಗಳಿಗೆ ಏಕಕಾಲದಲ್ಲಿ ಅನೇಕ ಕ್ಷೇತ್ರಗಳಿಗೆ ಚಲಿಸುವ ಸಾಮರ್ಥ್ಯವಿದೆ ”ಎಂದು ಪ್ರಧಾನಿ ಹೇಳಿದರು.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ತೆಲಂಗಾಣ ರಾಷ್ಟ್ರ ಸಮಿತಿ ನಾಯಕ ಕೆ ಚಂದ್ರಶೇಖರ್ ರಾವ್, ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್, ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್, ವೈ.ಎಸ್.ಆರ್ ಕಾಂಗ್ರೆಸ್ ಪಕ್ಷದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಸಭೆಯಲ್ಲಿ ಭಾಗವಹಿಸಿದ್ದರು.
“ನಮ್ಮ ಪಡೆಗಳನ್ನು ನಿಯೋಜಿಸುವುದು, ಕ್ರಮ ಕೈಗೊಳ್ಳುವುದು ಅಥವಾ ಪ್ರತಿ ಕ್ರಮಗಳನ್ನು ತೆಗೆದುಕೊಳ್ಳುವುದು, ಗಾಳಿಯಲ್ಲಿ ಅಥವಾ ನೀರಿನಲ್ಲಿ ಕಾರ್ಯಾಚರಣೆ ಮಾಡುವುದು ಹೀಗೆ ನಮ್ಮ ಗಡಿಗಳನ್ನು ರಕ್ಷಿಸಲು ಬೇಕಾದ ಎಲ್ಲವನ್ನೂ ನಾವು ಮಾಡುತ್ತಿದ್ದೇವೆ” ಎಂದು ಪ್ರಧಾನಿ ಎಲ್ಲಾ ಪಕ್ಷಗಳಿಗೆ ಭರವಸೆಯನ್ನು ನೀಡಿದರು.
ಗಡಿ ಪ್ರದೇಶಗಳಲ್ಲಿನ ಮೂಲಸೌಕರ್ಯ ಅಭಿವೃದ್ಧಿಯು ಕಳೆದ ವರ್ಷಗಳಲ್ಲಿ ವೇಗದಲ್ಲಿದೆ ಮತ್ತು ಇದು ನಮ್ಮ ಗಸ್ತು ಸಾಮರ್ಥ್ಯವನ್ನು ಬಲಪಡಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.