ನವದೆಹಲಿ: ದೇಶದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಯಾನದ ಮೇಲಿನ ನಿಷೇಧವನ್ನು ಜುಲೈ 31 ರವರೆಗೆ ವಿಸ್ತರಿಸುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಪ್ರಕಟನೆ ಹೊರಡಿಸಿದೆ ಎಂದು ವರದಿಗಳು ತಿಳಿಸಿವೆ.
ಆದರೂ, ವಾಯುಯಾನ ನಿಯಂತ್ರಕವು ಆಯ್ದ ಮಾರ್ಗಗಳಲ್ಲಿ ಆಯ್ದ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಸನ್ನಿವೇಶದ ಆಧಾರದ ಮೇಲೆ ಅನುಮತಿಸಬಹುದು ಎಂಬುದನ್ನು ಸ್ಪಷ್ಟಪಡಿಸಿದೆ.
“ಅಂತರರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ವಿಶೇಷವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ” ಎಂದು ಅದು ಸುತ್ತೋಲೆಯಲ್ಲಿ ತಿಳಿಸಿದೆ.
ಜೂನ್ 20 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಇತರ ದೇಶಗಳು ತಮ್ಮ ವಾಯುಪ್ರದೇಶ ಅಥವಾ ಗಡಿಗಳನ್ನು ತೆರೆದ ನಂತರವೇ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ಹೇಳಿದ್ದರು.
ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 23 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಏರ್ ಇಂಡಿಯಾ ಮತ್ತು ಇತರ ಖಾಸಗಿ ದೇಶೀಯ ವಿಮಾನಯಾನ ಸಂಸ್ಥೆಗಳು ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.