ಮುಂಬೈ: ವಿಶ್ವದ ಎರಡನೇಯ ಅತೀ ದೊಡ್ಡ ದತ್ತಾಂಶ ಕೇಂದ್ರವನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಘಾಟಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ. ಎಲ್ಲಾ ಮೂಲಸೌಕರ್ಯಗಳನ್ನೊಳಗೊಂಡ ಈ ಡಾಟಾ ಸೆಂಟರ್ ಅನ್ನು ಹೀರಾನಂದನಿ ಸಂಸ್ಥೆ ಅಭಿವೃದ್ಧಿ ಮಾಡಿದೆ.
“ವಿಶ್ವದ ಎರಡನೇ ಅತಿದೊಡ್ಡ ದತ್ತಾಂಶ ಕೇಂದ್ರವನ್ನು ಇಂದು ಮುಂಬೈನಲ್ಲಿ ಉದ್ಘಾಟಿಸಲಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ. ಈ ವಿಶ್ವದರ್ಜೆಯ ಮೂಲಸೌಕರ್ಯವನ್ನು ಹಿರಾನಂದಾನಿ ಗ್ರೂಪ್ ಅಭಿವೃದ್ಧಿಪಡಿಸಿದೆ ”ಎಂದು ಅವರು ಟ್ವಿಟ್ ಮಾಡಿದ್ದಾರೆ
ಈ ನಡುವೆ ಮಹಾರಾಷ್ಟ್ರ ದಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಕಾರಣದಿಂದಾಗಿ ಜುಲೈ 31 ರ ವರೆಗೂ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಯಲ್ಲಿರಲಿದೆ. ಆ ಮೂಲಕ ಕೊರೋನಾ ಸೋಂಕು ನಿಯಂತ್ರಣ ಮಾಡುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆದಿತ್ಯ ಠಾಕ್ರೆ ಮಾಹಿತಿ ನೀಡಿದ್ದಾರೆ.
ಈ ವರೆಗೆ ರಾಜ್ಯ ರಾಜಧಾನಿ ಮುಂಬೈ ನಲ್ಲಿ 86,132 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. 22,996 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ 985 ರೋಗಿಗಳು ಗುಣಮುಖರಾಗುವ ಮೂಲಕ, ಚೇತರಿಸಿಕೊಂಡವರ ಸಂಖ್ಯೆ 58,137 ಕ್ಕೇರಿದೆ. ಮಂಗಳವಾರ 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 4999 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಐಸಿಎಂಆರ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವೈದ್ಯರು ಸೂಚಿಸದ ಜನರು ಸ್ವಯಂ ಪ್ರೇರಿತರಾಗಿ ಕೊರೋನಾ ಪರೀಕ್ಷೆ ನಡೆಸಲು ಮುಂದಾದಲ್ಲಿ ಅವರನ್ನು ಪರೀಕ್ಷಿಸುವುದಕ್ಕೂ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಲಿದೆ ಎಂದು ಆದಿತ್ಯ ಠಾಕ್ರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Delighted that the second largest data center of the world was inaugurated in Mumbai today. This world class infrastructure has been developed by the Hiranandani Group. pic.twitter.com/tOW5LFqF3f
— Ravi Shankar Prasad (@rsprasad) July 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.