ನವದೆಹಲಿ: ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿರುವ ಅವರು, ಮಧ್ಯಪ್ರದೇಶದಲ್ಲಿ ಅದು ಸರ್ಕಾರವನ್ನು ವ್ಯವಹಾರದಂತೆ ನಡೆಸುತ್ತಿದೆ ಎಂದಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಜ್ಯೋತಿರಾದಿತ್ಯ ಅವರು, ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರದ ಪತನವಾಗುವುದಕ್ಕೆ ಕಾರಣವಾಗಿದ್ದರು. ಬಳಿಕದಿಂದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಅದರ ಧೋರಣೆಗಳ ವಿರುದ್ಧ ಖಂಡನೆಗಳನ್ನು ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಪ್ರದೇಶದ ಜನರು ಕಾಂಗ್ರೆಸ್ ಬಗ್ಗೆ ಭ್ರಮನಿರಸನಗೊಂಡಿದ್ದಾರೆ ಎಂದಿದ್ದಾರೆ.
“ರಾಜಸ್ಥಾನದ ಜನರು ಕಾಂಗ್ರೆಸ್ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅದು 15 ತಿಂಗಳ ಆಡಳಿತವನ್ನು ವ್ಯವಹಾರದಂತೆ ನಡೆಸಿಕೊಂಡು ಬರುತ್ತಿದೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯ ಸಚಿವಾಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಚಾಲ್ತಿಯಲ್ಲಿದೆ” ಎಂದಿದ್ದಾರೆ.
ತಮ್ಮ ಮಾತುಗಳ ಮೂಲಕ ಅವರು ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
“ಇಂದು ಸಚಿನ್ ಪೈಲೆಟ್ ಅವರು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಂದ ಮೂಲೆಗುಂಪಾಗುವುದನ್ನು ನೋಡಲು ಬೇಸರವಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಭೆ ಮತ್ತು ಸಾಮರ್ಥ್ಯಕ್ಕೆ ಬೆಲೆ ಇಲ್ಲ ಎಂಬುದು ತಿಳಿಯುತ್ತದೆ” ಎಂದು ಸಿಂಧಿಯಾ ಹೇಳಿದ್ದಾರೆ.
ಸಿಂಧಿಯಾ ಹಾಗೂ ಸಚಿನ್ ಪೈಲೆಟ್ ಇಬ್ಬರೂ ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಆ ಪಕ್ಷದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ತನ್ನ ಧೋರಣೆಯ ಕಾರಣದಿಂದ ಅವರಿಬ್ಬರನ್ನೂ ಮೂಲೆಗುಂಪು ಮಾಡಿತು. ಇದೀಗ ಇಬ್ಬರೂ ಆ ಪಕ್ಷದಿಂದ ಹೊರ ನಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.