ನವದೆಹಲಿ: ಭಾರತದ ಮಿಲಿಟರಿ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು ಒಟ್ಟಾರೆ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಲಡಾಖ್ಗೆ ಬಂದಿಳಿದರು. ಅವರು ನೈಜ ನಿಯಂತ್ರಣ ರೇಖೆ (ಎಲ್ಎಸಿ) ಮತ್ತು ನಿಯಂತ್ರಣ ರೇಖೆ (ಎಲ್ಒಸಿ) ಎರಡರಲ್ಲೂ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ರಕ್ಷಣಾ ಸಚಿವರು ಕಾಶ್ಮೀರದ ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ ಮತ್ತು ತಳಮಟ್ಟದ ಪರಿಸ್ಥಿತಿಯನ್ನು ನಿರ್ಣಯಿಸಲು ಕ್ಷೇತ್ರ ಕಮಾಂಡರ್ಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದು ಹೇಳಲಾಗಿದೆ.
ಶುಕ್ರವಾರ ಬೆಳಿಗ್ಗೆ ಲಡಾಖ್ಗೆ ಆಗಮಿಸಿದ ರಾಜನಾಥ್ ಅವರೊಂದಿಗೆ ಸೇನಾ ಮುಖ್ಯಸ್ಥ ಎಂ.ಎಂ.ನಾರವಾನೆ ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಇದ್ದರು.
ಭೇಟಿಗೂ ಮುಂಚಿತವಾಗಿ ಟ್ವಿಟ್ ಮಾಡಿರುವ ರಾಜನಾಥ್ ಸಿಂಗ್ ಅವರು, “ಲಡಾಖ್ ಮತ್ತು ಜಮ್ಮು-ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಗಾಗಿ ಲೇಹ್ಗೆ ತೆರಳುತ್ತಿದ್ದೇನೆ. ಗಡಿಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಈ ಪ್ರದೇಶದಲ್ಲಿ ನಿಯೋಜಿಸಲಾದ ಸಶಸ್ತ್ರ ಪಡೆಗಳ ಸಿಬ್ಬಂದಿಯೊಂದಿಗೆ ಸಂವಹನ ನಡೆಸಲು ನಾನು ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಅದಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಪೂರ್ವ ಲಡಾಖ್ನ ಎಲ್ಎಸಿಯ ಉದ್ದಕ್ಕೂ ಘರ್ಷಣೆ ನಡೆದ ಸ್ಥಳಗಳಲ್ಲಿ ಭಾರತ ಮತ್ತು ಚೀನಾ ಸಂಪೂರ್ಣ ಸೇನಾ ನಿಯೋಜನೆಯನ್ನು ಹಿಂಪಡೆಯುವಿಕೆಯನ್ನು ಅಂತಿಮಗೊಳಿಸಲು ಮುಂದಾಗುತ್ತಿರುವ ಸಂದರ್ಭದಲ್ಲಿ ರಾಜನಾಥ್ ಅವರು ಭೇಟಿ ನೀಡುತ್ತಿದ್ದಾರೆ. ಜುಲೈ 15 ರಂದು 15 ಗಂಟೆಗಳ ಕಾಲ ಕಾರ್ಪ್ಸ್ ಕಮಾಂಡರ್-ಮಟ್ಟದ ಮಾತುಕತೆ ನಡೆದಿತ್ತು, ಇದು ಉಭಯ ದೇಶಗಳ ನಡುವೆ ನಡೆದ ನಾಲ್ಕನೆಯ ಸಭೆ. ಗಾಲ್ವಾನ್ ವ್ಯಾಲಿ, ಹಾಟ್ ಸ್ಪ್ರಿಂಗ್ಸ್ ಮತ್ತು ಗೊಗ್ರಾ ಪ್ರದೇಶಗಳಲ್ಲಿ ಸೇನೆಗಳು ಸುಮಾರು 1-1.5 ಕಿ.ಮೀ ಹಿಂದಕ್ಕೆ ಸರಿದಿದ್ದರಿಂದ ಎಲ್ಲಾ ಘರ್ಷಣೆ ಪ್ರದೇಶಗಳಲ್ಲಿ ಮೊದಲ ಸುತ್ತಿನ ನಿಷ್ಕ್ರಿಯಗೊಳಿಸುವಿಕೆ ನಡೆದಿದೆ ಎಂದು ಹೇಳಲಾಗಿದೆ.
Leaving for Leh on a two day visit to Ladakh and Jammu-Kashmir. I shall be visiting the forward areas to review the situation at the borders and also interact with the Armed Forces personnel deployed in the region. Looking forward to it.
— Rajnath Singh (@rajnathsingh) July 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.