ಶ್ರೀನಗರ: ಜಮ್ಮು ಕಾಶ್ಮೀರ ಭೇಟಿಯ ಎರಡನೇ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮರನಾಥ ಗುಹಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಎಂಎಂ ನರವಾಣೆ ಅವರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು.
ಸುಮಾರು ಒಂದು ಗಂಟೆಗಳ ಕಾಲ ಅವರು ಅಮರನಾಥ ಗುಹಾಲಯದಲ್ಲಿದ್ದುದಾಗಿಯೂ ಮೂಲಗಳು ತಿಳಿಸಿವೆ. ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವರು, ಅಮರನಾಥ ಗುಹಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುದಾಗಿಯೂ ತಿಳಿಸಿದ್ದಾರೆ.
ಪ್ರವಾಸದ ಮೊದಲ ದಿನ ಉನ್ನತ ಸೇನಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದ ರಕ್ಷಣಾ ಸಚಿವರು, ದೇಶದ ಭದ್ರತೆಯ ದೃಷ್ಟಿಯಿಂದ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದರು. ಜೊತೆಗೆ ಪಾಕಿಸ್ಥಾನದ ದುಷ್ಟತನಕ್ಕೂ ತಕ್ಕ ಶಾಸ್ತಿ ಮಾಡುವಂತೆಯೂ ಸೂಚಿಸಿದ್ದರು. ಅಲ್ಲದೆ ಗಡಿ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಲು ಪೂರಕ ಕ್ರಮ ತೆಗೆದುಕೊಳ್ಳುವಂತೆಯೂ ಅಧಿಕಾರಿಗಳಿಗೆ ತಿಳಿಸಿದ್ದರು.
Feeling extremely blessed after praying at Shri Amarnathji Holy Cave in Jammu and Kashmir.
बर्फ़ानी बाबा की जय! pic.twitter.com/Ib5jgLUpkt
— Rajnath Singh (@rajnathsingh) July 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.