ನವದೆಹಲಿ: ಕೊರೋನಾವೈರಸ್ ಕಾರಣದಿಂದ ಹೇರಲಾಗಿದ್ದ ಲಾಕ್ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರವು ತನ್ನ ಜಲ ಜೀವನ್ ಮಿಷನ್ ಅಡಿಯಲ್ಲಿ ಹಲವು ರಾಜ್ಯಗಳಾದ್ಯಂತ ನಾಲ್ಕು ಮಿಲಿಯನ್ ಟ್ಯಾಪ್ ಸಂಪರ್ಕಗಳನ್ನು ಯಶಸ್ವಿಯಾಗಿ ಒದಗಿಸಿದೆ ಎಂದು ವರದಿಗಳು ತಿಳಿಸಿವೆ.
ಏಪ್ರಿಲ್ 1 ಮತ್ತು ಜೂನ್ 30 ರ ನಡುವೆ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೇತೃತ್ವದ ಜಲ ಶಕ್ತಿ ಸಚಿವಾಲಯವು 8.1 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತವನ್ನು ತನ್ನ ಜಲ್ ಜೀವನ್ ಮಿಷನ್ ಯೋಜನೆಯಡಿ ಟ್ಯಾಪ್ ಸಂಪರ್ಕ ಒದಗಿಸಲು ವಿನಿಯೋಗಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಮಿಷನ್ ಅಡಿಯಲ್ಲಿ ಭಾರತದ ಪ್ರತಿಯೊಂದು ಮನೆಗೂ ಟ್ಯಾಪ್ ವಾಟರ್ ಸಂಪರ್ಕವನ್ನು ಒದಗಿಸಲು ಉದ್ದೇಶಿಸಲಾಗಿದೆ.
ಈ ಪ್ರಯತ್ನವು ವಿಶೇಷವಾಗಿ 116 ಜಿಲ್ಲೆಗಳಲ್ಲಿ ತೀವ್ರವಾಗಿ ನಡೆದಿದೆ. ಈ ಕಾರ್ಯಕ್ರಮವು ಜೂನ್ ತಿಂಗಳಲ್ಲಿ ಮತ್ತಷ್ಟು ವೇಗವನ್ನು ಕಂಡಿದ್ದು, ವಲಸೆ ಕಾರ್ಮಿಕರು ತಮ್ಮ ಸ್ವಂತ ಜಿಲ್ಲೆಗಳಿಗೆ ಮರಳಿದ ಹಿನ್ನಲೆಯಲ್ಲಿ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ಕಾರ್ಯಕ್ರಮದ ಅಡಿಯಲ್ಲಿ ಬಿಹಾರವು ಅತಿದೊಡ್ಡ ಫಲಾನುಭವಿಯಾಗಿ ಹೊರಹೊಮ್ಮಿದ್ದು, 1.03 ಮಿಲಿಯನ್ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. ಏಕಕಾಲದಲ್ಲಿ ಜೂನ್ ಒಂದರಲ್ಲೇ 7,500 ಕ್ಕೂ ಹೆಚ್ಚು ಮರಳಿದ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ. ಈ ಸಂಖ್ಯೆಯನ್ನು 15,000 ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊಂಡೊಯ್ಯುವ ಗುರಿ ರಾಜ್ಯದಲ್ಲಿದೆ.
ಉತ್ತರ ಪ್ರದೇಶವು 4,000 ಕ್ಕೂ ಹೆಚ್ಚು ಮರಳಿದ ಕಾರ್ಮಿಕರನ್ನು ನೇಮಿಸಿಕೊಂಡಿದೆ ಮತ್ತು ಜಲ ಜೀವನ್ ಮಿಷನ್ ಅನ್ನು ಪ್ರಾಮಾಣಿಕತೆಯಿಂದ ಕೈಗೆತ್ತಿಕೊಂಡಿದೆ. ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಮರಳಿದ 31 ಜಿಲ್ಲೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶದಿಂದ ಸುಮಾರು 1,205 ಕೋಟಿ ರೂ.ವಿನಿಯೋಗಿಸಲಾಗುತ್ತಿದೆ.
ಮಿಷನ್ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ 30,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.