ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷದ ಅಮರನಾಥ ಯಾತ್ರೆ ರದ್ದುಗೊಂಡಿದೆ. ತೀರ್ಥಯಾತ್ರೆಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್ಎಎಸ್ಬಿ) ಮಂಗಳವಾರ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಂಡಿದೆ.
“ಸನ್ನಿವೇಶಗಳ ಆಧಾರದ ಮೇಲೆ, ಶ್ರೀ ಅಮರನಾಥಜಿ ದೇವಾಲಯ ಮಂಡಳಿಯು ಈ ವರ್ಷದ ಅಮರನಾಥ ಯಾತ್ರೆಯನ್ನು ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿದೆ ಮತ್ತು ಯಾತ್ರೆ 2020 ರದ್ದತಿಯನ್ನು ಘೋಷಿಸಲು ವಿಷಾದ ವ್ಯಕ್ತಪಡಿಸಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜ ಭವನ ಹೇಳಿದೆ.
ಧಾರ್ಮಿಕ ಭಾವನೆಗಳನ್ನು ಜೀವಂತವಾಗಿಡಲು, ಮಂಡಳಿಯು ಬೆಳಿಗ್ಗೆ ಮತ್ತು ಸಂಜೆ ಆರತಿಯ ನೇರ ಪ್ರಸಾರ / ವರ್ಚುವಲ್ ದರ್ಶನವನ್ನು ಮುಂದುವರಿಸಲಿದೆ. ಹಿಂದಿನ ಆಚರಣೆಯ ಪ್ರಕಾರವೇ ಸಾಂಪ್ರದಾಯಿಕ ಆಚರಣೆಗಳನ್ನು ಕೈಗೊಳ್ಳಲಾಗುತ್ತದೆ” ಎಂದು ರಾಜ ಭವನ ಹೇಳಿದೆ.
ಈ ನಿರ್ಧಾರವು ಅಂತಿಮವಾಗಿ ವಾರ್ಷಿಕ ತೀರ್ಥಯಾತ್ರೆಯ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಕೋವಿಡ್-19 ರ ದೃಷ್ಟಿಯಿಂದ ಈ ವರ್ಷದ ಅಮರನಾಥ ಯಾತ್ರೆಯನ್ನು ಅಮಾನತುಗೊಳಿಸುವಂತೆ ಕೇಂದ್ರ, ಜಮ್ಮು ಮತ್ತು ಕಾಶ್ಮೀರ ಆಡಳಿತ ಮತ್ತು ಎಸ್ಎಎಸ್ಬಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
ಅಮರನಾಥ ಯಾತ್ರೆ ಜುಲೈ 21ರಿಂದ ಪ್ರಾರಂಭವಾಗುದರಲ್ಲಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.