ಲಕ್ನೋ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವು ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಇಂದು ಆಗಮಿಸಿದ್ದು, ಕಾರ್ಯಕ್ರಮಗಳ ಸಿದ್ಧತೆಯ ಬಗ್ಗೆ ಪರಿಶೀಲನೆಯನ್ನು ನಡೆಸಿದರು.
ಯೋಗಿ ಅವರು ಅಯೋಧ್ಯೆಯ ರಾಮಜನ್ಮಭೂಮಿ ಜಾಗದಲ್ಲಿ ಶ್ರೀರಾಮನಿಗೆ ಪ್ರಾರ್ಥನೆಗಳನ್ನು ಸಲ್ಲಿಸಿದರು. ವರದಿಗಳ ಪ್ರಕಾರ, ಅವರು ಇಂದು ರಾಮ ಜನ್ಮಭೂಮಿಯ ಹೊಸ ಆಸನಗಳಲ್ಲಿ ಲಕ್ಷ್ಮಣ, ಭರತ ಮತ್ತು ಶತ್ರುಘ್ನನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದಾರೆ.
ಅಲ್ಲದೆ, ಯೋಗಿ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತದ ಸದಸ್ಯರುಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ. ಹನುಮನ್ ಗರ್ಹಿಯಲ್ಲಿ ಅವರು ಹನುಮಂತನಿಗೆ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಆಗಮಿಸಿದ ರಾಮಮಂದಿರಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸುವ ಸಾಧ್ಯತೆ ಇದೆ.
ವಾರಣಾಸಿಯಿಂದ 5 ಪಂಡಿತರು ಅಯೋಧ್ಯೆಗೆ ಆಗಮಿಸಲಿದ್ದು, ಅವರ ಉಸ್ತುವಾರಿಯಲ್ಲಿ ಭವ್ಯ ರಾಮಮಂದಿರಕ್ಕೆ ಭೂಮಿಪೂಜೆ ಕಾರ್ಯಕ್ರಮ ನೆರವೇರಲಿದೆ. ಐವರ ಪೈಕಿ ಮೂವರು ಜ್ಯೋತಿಷ್ಯಗಳಾಗಿದ್ದು, ಇಬ್ಬರೂ ಸಂತರಾಗಿದ್ದಾರೆ. ಆ.4ರಂದೇ ಅವರು ಅಯೋಧ್ಯೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
Ayodhya: Uttar Pradesh Chief Minister Yogi Adityanath is holding a meeting with the members of Shri Ram Janmabhoomi Teerth Kshetra Trust and local administration. pic.twitter.com/WOhbbzSB3v
— ANI UP (@ANINewsUP) July 25, 2020
Ayodhya: Uttar Pradesh Chief Minister Yogi Adityanath offers prayers to Lord Hanuman in Hanuman Garhi. pic.twitter.com/bfhulUdR62
— ANI UP (@ANINewsUP) July 25, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.