ನವದೆಹಲಿ: ಪೂರ್ವ ಲಡಾಕ್ನ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ನಲ್ಲಿರುವ ನಿಯಂತ್ರಣ ರೇಖೆಯಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ತಮ್ಮ ಮಿಲಿಟರಿ ಪಡೆಗಳನ್ನು ಅಲ್ಲಿಂದ ಹಿಂದಕ್ಕೆ ಕರೆಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ಸೇನೆಗಳ ಉನ್ನತ ಕಮಾಂಡರ್ಗಳು ಇನ್ನೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಚೀನಾ ಭಾರತ ಗಡಿ ವಿವಾದಗಳಿಗೆ ಸಂಬಂಧಿಸಿದಂತೆ 2013 ರಿಂದಲೂ ಈ ವರೆಗೆ ಹಲವು ಸಮಾಲೋಚನೆಗಳು ನಡೆದಿದ್ದು, ಶುಕ್ರವಾರ 17 ನೇ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಭಾರತದ ಪರವಾಗಿ ವಿದೇಶಾಂಗ ವ್ಯವಹಾರಗಳ ಇಲಾಖೆಯ ಪೂರ್ವ ಏಷ್ಯಾ ವಿಭಾಗದ ಮುಖ್ಯಸ್ಥ ನವೀನ್ ಶ್ರೀವತ್ಸ ಮತ್ತು ಚೀನಾ ಪರ ಗಡಿ ಮತ್ತು ಸಾಗರ ವಿದ್ಯಮಾನಗಳ ಪ್ರಧಾನ ನಿರ್ದೇಶಕ ಹಾಂಗ್ ಲಿಯಾಂಗ್ ಭಾಗವಹಿಸಿದ್ದರು.
ಪಾಂಗೊಂಗ್ ತ್ಸೊ ಸರೋವರದ ತೀರ ಪ್ರದೇಶ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ತನ್ನ ಸೇನಾ ತುಕಡಿಗಳನ್ನು ಚೀನಾ ಹಿಂದಕ್ಕೆ ಕರೆಸಿಕೊಂಡಿಲ್ಲ. ಹಿಂದೆ ಕರೆಸಿಕೊಳ್ಳುವ ಯೋಚನೆಯೂ ಚೀನಾಗೆ ಇದ್ದಂತಿಲ್ಲ. ಒಪ್ಪಂದವನ್ನು ಚೀನಾ ಅನುಸರಿಸಿಲ್ಲ ಎಂದು ಭಾರತ ಆಕ್ಷೇಪವನ್ನೂ ವ್ಯಕ್ತಪಡಿಸಿದೆ. ಜೊತೆಗೆ ಎಲ್ ಎ ಸಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಚೀನಾ ಹೆಚ್ಚಿನ ಪ್ರಮಾಣದಲ್ಲಿ ಸೇನೆಯನ್ನು ನೇಮಿಸಿದ್ದು ಈ ವಿಚಾರವನ್ನೂ ಭಾರತ ಗಂಭೀರವಾಗಿ ತೆಗೆದುಕೊಂಡಿದೆ.
ಈಗಾಗಲೇ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಮತ್ತು ಸಂಭಾವ್ಯ ಅಪಾಯ ಎದುರಾಗಬಹುದಾದ ಎಲ್ಲಾ ಪ್ರದೇಶಗಳಿಂದಲೂ ಚೀನಾ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಭಾರತ ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.