ನವದೆಹಲಿ: ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಾಸ್ ಕರೆತರಲು ಆರಂಭಿಸಲಾದ ವಂದೇ ಭಾರತ್ ಮಿಷನ್ನ ಐದನೇ ಹಂತ ಮುಂದಿನ ತಿಂಗಳು 1ರಿಂದ ಪ್ರಾರಂಭವಾಗಲಿದೆ. ಇದು ಆಗಸ್ಟ್ 31 ರವರೆಗೆ ಮುಂದುವರಿಯಲಿದೆ.
ಶೀಘ್ರದಲ್ಲೇ ಈ ಕಾರ್ಯಾಚರಣೆಯ ವಿವರವಾದ ವೇಳಾಪಟ್ಟಿಯನ್ನು ಹಂಚಿಕೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಸಿಲುಕಿ ಹಾಕಿಕೊಂಡ ಪ್ರತಿಯೊಬ್ಬ ಭಾರತೀಯರ ಸ್ಥಳಾಂತರಿಸುವಿಕೆ ನಮ್ಮ ಆದ್ಯತೆಯಾಗಿದೆ. ಭಾರತದಲ್ಲಿ ಸಿಲುಕಿ ಹಾಕಿಕೊಂಡಿರುವನನ್ನೂ ಹಿಂದೆ ಕಳುಹಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ವಂದೇ ಭಾರತ್ ಮಿಷನ್ ಅಡಿಯಲ್ಲಿ ಈ ವರ್ಷದ ಮೇ 6 ರಿಂದ ಎಂಟು ಲಕ್ಷ 14 ಸಾವಿರ ಜನರನ್ನು ವಿವಿಧ ವಿಧಾನಗಳ ಮೂಲಕ ಮರಳಿ ಕರೆತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.