ನವದೆಹಲಿ: ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ಗಳನ್ನು ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ಹೇಳಿದರು.
ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ ಅಡಿಯಲ್ಲಿನ ನಾವೀನ್ಯತೆ ಮತ್ತು ಅಗ್ರಿಪ್ರೆನಿಯರ್ಶಿಪ್ ಘಟಕದ ಅಡಿಯಲ್ಲಿ ಕೃಷಿ ಸಚಿವಾಲಯವು ಸ್ಟಾರ್ಟ್ ಅಪ್ ಗಳಿಗೆ ಹಣ ನೀಡುತ್ತಿದೆ ಮತ್ತು ಮೊದಲ ಹಂತದಲ್ಲಿ (2020-21) ಕೃಷಿ ಸಂಸ್ಕರಣೆ, ಆಹಾರ ತಂತ್ರಜ್ಞಾನ ಮತ್ತು ಮೌಲ್ಯವರ್ಧನೆ ಕ್ಷೇತ್ರದಲ್ಲಿ 112 ಸ್ಟಾರ್ಟ್ಅಪ್ ಗಳಿಗೆ ಅವಕಾಶ ನೀಡಲಾಗುವುದು ಎಂದು ತೋಮರ್ ಹೇಳಿದರು. ಇದಕ್ಕಾಗಿ 1185.90 ಲಕ್ಷ ರೂಪಾಯಿಗಳ ನಿಧಿ ಒದಗಿಸಲಾಗುವುದು. ರೈತರ ಆದಾಯವನ್ನು ಹೆಚ್ಚಿಸಲು ಈ ನಿಧಿಯನ್ನು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಒತ್ತಿಹೇಳಿದಂತೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಹೊಸ ತಂತ್ರಜ್ಞಾನವನ್ನು ಸ್ಟಾರ್ಟ್ ಅಪ್ ಮತ್ತು ಅಗ್ರಿಪ್ರೆನಿಯರ್ಶಿಪ್ ಮೂಲಕ ಉತ್ತೇಜಿಸಬೇಕಿದೆ ಎಂದು ಕೇಂದ್ರ ಕೃಷಿ ಸಚಿವರು ಹೇಳಿದರು. ಆದ್ದರಿಂದ, ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿಯಲ್ಲಿ, ನಾವೀನ್ಯತೆ ಮತ್ತು ಅಗ್ರಿಪ್ರೆನಿಯರ್ಶಿಪ್ ಘಟಕವನ್ನು ಉತ್ತೇಜಿಸಲಾಗಿದೆ ಎಂದರು.
ಕೃಷಿಯನ್ನು ಸ್ಪರ್ಧಾತ್ಮಕವಾಗಿಸುವುದು, ಕೃಷಿ ಆಧಾರಿತ ಚಟುವಟಿಕೆಗಳಿಗೆ ಹ್ಯಾಂಡ್ಹೋಲ್ಡಿಂಗ್ ಒದಗಿಸುವುದು ಮತ್ತು ಹೊಸ ತಂತ್ರಜ್ಞಾನವನ್ನು ಶೀಘ್ರವಾಗಿ ಅಳವಡಿಸಿಕೊಳ್ಳುವ ಅಗತ್ಯವನ್ನು ತೋಮರ್ ಒತ್ತಿ ಹೇಳಿದರು. ಕೃಷಿ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಯನ್ನು ಹೆಚ್ಚಿಸಲು ಒತ್ತು ನೀಡಿರುವ ಸಚಿವರು, ಮೌಲ್ಯವರ್ಧನೆ ಮತ್ತು ಸ್ಟಾರ್ಟ್ ಅಪ್ಗಳ ಅಗತ್ಯತೆಯ ಬಗ್ಗೆ ಗಮನ ಸೆಳೆದಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.