ಲಕ್ನೋ: ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ್ದ ವಿಶ್ವ ಹಿಂದೂ ಪರಿಷತ್ನ ನಾಯಕರಾಗಿದ್ದ ದಿವಂಗತ ಅಶೋಕ್ ಸಿಂಘಾಲ್ ಅವರ ಪ್ರತಿಮೆಯನ್ನು ಅಯೋಧ್ಯೆ ಮತ್ತು ಪ್ರಯಾಗ್ರಾಜ್ಗಳಲ್ಲಿ ನಿರ್ಮಾಣ ಮಾಡಬೇಕು ಎಂಬ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ಎಬಿಎಪಿ (ಅಖಿಲ ಭಾರತೀಯ ಅಖಾರ ಪರಿಷದ್) ತಿಳಿಸಿದೆ.
ರಾಮ ಜನ್ಮಭೂಮಿ ಹೋರಾಟದಲ್ಲಿ ಪ್ರಾಣ ತೆತ್ತವರ ನೆನಪಿಗಾಗಿ ಕೀರ್ತಿಸ್ಥಂಭ ನಿರ್ಮಾಣ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಎಬಿಎಪಿ ತಿಳಿಸಿದೆ. ಕೀರ್ತಿಸ್ಥಂಭಗಳಲ್ಲಿ ರಾಮ ಮಂದಿರಕ್ಕಾಗಿ ಜೀವವನ್ನೇ ಅರ್ಪಣೆ ಮಾಡಿದವರ ಹೆಸರುಗಳನ್ನು ಕೆತ್ತುವಂತೆ ಎಬಿಎಪಿ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಎಬಿಎಪಿಯ ಜನರಲ್ ಸೆಕ್ರೆಟರಿ ಸ್ವಾಮಿ ಹರಿ ಗಿರಿ, ಹಲವು ದಶಕಗಳಿಂದ ಅಯೋಧ್ಯೆಯ ಮಂದಿರ ನಿರ್ಮಾಣದ ಹೋರಾಟ ನಡೆದಿದೆ. ಈ ಸಂದರ್ಭದಲ್ಲಿ ಅನೇಕ ರಾಮ ಜನ್ಮಭೂಮಿ ಪರ ಹೋರಾಟಗಾರರು ಮಡಿದಿದ್ದಾರೆ. ಕೊಠಾರಿ ಸಹೋದರರೂ ಜನ್ಮಭೂಮಿ ವಿಚಾರದಲ್ಲಿ ಪ್ರಾಣಾರ್ಪಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಎಚ್ಪಿಯ ಮಾಜಿ ನಾಯಕ ದಿವಂಗತ ಅಶೋಕ್ ಸಿಂಘಾಲ್ ಅವರು ಹೋರಾಟಗಾರರಿಗೆ ತಮ್ಮ ಮನೆಯನ್ನೇ ನೀಡಿದ್ದಾರೆ. ಪ್ರಸ್ತುತ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅಯೋಧ್ಯೆ ಹಾಗೂ ಪ್ರಯಾಗರಾಜ್ನಲ್ಲಿ ಕೀರ್ತಿಸ್ಥಂಭ ನಿರ್ಮಾಣವಾಗಬೇಕೆಂಬುದು ಪರಿಷತ್ನ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಇದು ಹೋರಾಟಗಾರರಿಗೆ ಸಲ್ಲಿಸುವ ಗೌರವದ ಪ್ರತೀಕ ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದ್ದು, ಇದರಲ್ಲಿ ಪ್ರಮುಖರ ಹೆಸರುಗಳನ್ನೂ ಉಲ್ಲೇಖಿಸಲಾಗಿದೆ. ನವರಾತ್ರಿ ಸಂದರ್ಭದಲ್ಲಿ ಪರಿಷತ್ನ ಸಭೆ ನಡೆಯಲಿದ್ದು, ಈ ಪ್ರಸ್ತಾವನೆಯನ್ನು ಪರಿಷತ್ನ ಮುಂದಿಟ್ಟು ಬಳಿಕ ಇದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದೂ ಹರಿ ಗಿರಿ ತಿಳಿಸಿದ್ದಾರೆ.
ಇನ್ನು ರಾಮ ಮಂದಿರದ ಹೋರಾಟದಲ್ಲಿ ಭಾಗಿಯಾದವರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವಂತೆಯೂ ಮನವಿ ಮಾಡಲಾಗಿದೆ. ರಾಮ ಜನ್ಮಭೂಮಿ ವಿವಾದ ಬಗೆಹರಿದಿದ್ದು, ಈ ಸಮಯದಲ್ಲಿ ಹೋರಾಟದಲ್ಲಿ ಭಾಗಿಗಳಾದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಈ ಮನವಿಯನ್ನು ಈಗಾಗಲೇ ಉತ್ತರ ಪ್ರದೇಶ ಸರ್ಕಾರದ ಮುಂದಿಟ್ಟಿದ್ದೇವೆ ಎಂದೂ ಎಬಿಎಪಿ ಮಾಹಿತಿ ನೀಡಿದೆ.
ಆಗಸ್ಟ್ 5 ರಂದು ನಡೆದ ಭೂಮಿ ಪೂಜನ್ ದಿನವನ್ನು ಪ್ರತಿ ವರ್ಷವೂ ದೀಪಾವಳಿಯಂತೆ ಸಂಭ್ರಮದಿಂದ ಆಚರಿಸಲು ಜನರು ನಿರ್ಧಾರ ಮಾಡಿರುವುದಾಗಿಯೂ ಹರಿ ಗಿರಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.