ಬೆಂಗಳೂರು: ಪ್ರವಾಹ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ಅವರಿಗೆ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳು ಮತ್ತು ಅದರ ಸಮೀಪದ ರಾಜ್ಯಗಳ ದುರ್ಬಲ ಪ್ರದೇಶಗಳಿಗೆ ಭೂಕುಸಿತ ಅಪಾಯದ ನಕ್ಷೆ, ಆರಂಭಿಕ ಮುನ್ನೆಚ್ಚರಿಕಾ ವ್ಯವಸ್ಥೆಯ ಅಭಿವೃದ್ಧಿ ಹಾಗೂ ಅಧ್ಯಯನಕ್ಕಾಗಿ ವಿಶೇಷ ಯೋಜನೆಯ ಕಾರ್ಯಗತಗೊಳಿಸಲು ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಜಲ ಆಯೋಗವು ಕೃಷ್ಣ ಜಲಾಯನ ಪ್ರದೇಶಕ್ಕಾಗಿ ಸಮಗ್ರ ಪ್ರವಾಹ ಮುನ್ಸೂಚನೆ ಮತ್ತು ಪ್ರತಿಕ್ರಿಯೆಯ ಬಗ್ಗೆ ಅಧ್ಯಯನ ನಡೆಸಲು ಹಾಗೂ ಸ್ಥಾಪಿಸಲು ವಿಶೇಷ ಯೋಜನೆ ರೂಪಿಸುವಂತೆ, ಈಗಾಗಲೇ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 4 ಎನ್ಡಿಆರ್ಎಫ್ ತಂಡೆಳ ಜೊತೆಗೆ ಹೆಚ್ಚುವರಿ4 ತಂಡಗಳ ನಿಯೋಜನೆ, ಸಮುದ್ರ ಸವೆತಗಳನ್ನು ತಡೆಯಲು ಪಶ್ಚಿಮ ಕರಾವಳಿಯಾದ್ಯಂತ ಜಿಒಐ ಅಸ್ತಿತ್ವದಲ್ಲಿರುವ ಎಡಿಬಿ ನೆರವಿನ ಯೋಜನೆ ವಿಸ್ತರಣೆಗೆ ಸಂಬಂಧಿಸಿದಂತೆಯೂ ಕೇಂದ್ರ ಸರ್ಕಾರಕ್ಕೆ ವಿನಂತಿಸಿಕೊಳ್ಳಲಾಗಿದೆ.
ಹಾಗೆಯೇ, ರಾಜ್ಯದಲ್ಲಿನ ಪ್ರಸ್ತುತ ಪ್ರವಾಹ ಪರಿಸ್ಥಿತಿ ನಿಭಾಯಿಸಲು 4,000 ಕೋಟಿ ರೂ. ಪರಿಹಾರ ಒದಗಿಸಿ ಕೊಡುವಂತೆಯೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಹಾಗೆಯೇ ಪರಿಹಾರ ಮತ್ತು ಪುನರ್ವಸತಿಗಾಗಿ ಎಸ್ಡಿಆರ್ಎಂಎಫ್ನ ಮುಂದಿನ ಬಾರಿಯ ಕಂತಿನ ಮೊತ್ತ 395 ಕೋಟಿ ರೂ. ಗಳನ್ನು ನೀಡುವಂತೆಯೂ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.