ನವದೆಹಲಿ: ಕಾರ್ಯತಾಂತ್ರಿಕವಾಗಿ ಪ್ರಾಮುಖ್ಯತೆಯ ದೂರದ ಗಡಿ ಪ್ರದೇಶಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಜನರಿಗೆ ಉತ್ತಮ ಜೀವನ ಮಟ್ಟವನ್ನು ಖಾತ್ರಿಪಡಿಸಿಕೊಳ್ಳಲು ಮೊಬೈಲ್ ಸಂಪರ್ಕವನ್ನು ಒದಗಿಸಲು ಸರ್ಕಾರ ಆದ್ಯತೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೂರದ ಮತ್ತು ಕಷ್ಟದ ಪ್ರದೇಶಗಳಲ್ಲಿ ಸಂಪರ್ಕವನ್ನು ಒದಗಿಸಲು ದೂರಸಂಪರ್ಕ ಇಲಾಖೆ (ಡಿಒಟಿ) ವಿವಿಧ ಯೋಜನೆಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ದೇಶದ ಆಯಕಟ್ಟಿನ, ದೂರದ ಮತ್ತು ಗಡಿ ಪ್ರದೇಶಗಳಲ್ಲಿನ 354 ಗ್ರಾಮಗಳಿಗೆ ಟೆಂಡರ್ ಅಂತಿಮಗೊಳಿಸಲಾಗಿದೆ ಎಂದು ಪ್ರಸಾದ್ ಮಾಹಿತಿ ನೀಡಿದರು. ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನ 144 ಗ್ರಾಮಗಳಲ್ಲಿ ಈ ಯೋಜನೆ ಜಾರಿಯಲ್ಲಿದೆ ಎಂದಿದ್ದಾರೆ.
ಅಲ್ಲದೇ, ಬಿಹಾರ, ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಹಳ್ಳಿಗಳಲ್ಲಿಯೂ ಕಾಮಗಾರಿ ನಡೆಯುತ್ತಿದೆ. ಗಡಿ ಪ್ರದೇಶದ ಸಂಪರ್ಕವನ್ನು ಮೊಬೈಲ್ ಸಂಪರ್ಕಕ್ಕೆ ಒಳಪಡಿಸಲು ಈ ಗ್ರಾಮಗಳನ್ನು ಕಾರ್ಯತಾಂತ್ರಿಕವಾದ ರೀತಿಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಸಂವಹನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
“ಈ ಗ್ರಾಮಗಳಲ್ಲಿ ಯೋಜನೆ ಕಾರ್ಯಗತಗೊಂಡ ಬಳಿಕ ಮೊಬೈಲ್ ಸಂಪರ್ಕವಿಲ್ಲದ ಯಾವುದೇ ಗ್ರಾಮಗಳು ಲಡಾಖ್, ಜಮ್ಮು ಮತ್ತು ಕಾಶ್ಮೀರಗಳಲ್ಲಿ ಇರುವುದಿಲ್ಲ. ಸೈನ್ಯ, ಬಿಆರ್ಒ, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಇತ್ಯಾದಿಗಳಿಗೆ 1347 ಸೈಟ್ಗಳಲ್ಲಿ ಡಿಜಿಟಲ್ ಸ್ಯಾಟಲೈಟ್ ಫೋನ್ ಟರ್ಮಿನಲ್ ಒದಗಿಸಲಾಗಿದೆ. ಇದರ ಪೈಕಿ 183 ಸೈಟ್ಗಳನ್ನು ಈಗಾಗಲೇ ನಿಯೋಜನೆಗೊಂಡಿವೆ ಮತ್ತು ಉಳಿದವು ಪ್ರಕ್ರಿಯೆಯಲ್ಲಿವೆ ” ಎಂದು ಸಚಿವಾಲಯ ತಿಳಿಸಿದೆ.
ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ 24 ಮಹತ್ವಾಕಾಂಕ್ಷೆಯ ಜಿಲ್ಲೆಗಳ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕವನ್ನು ಒದಗಿಸುವ ನಿಟ್ಟಿನಲ್ಲಿ ಡಿಒಟಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಸಾದ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.