ನವದೆಹಲಿ: ನಾಳೆ ದೇಶ 74ನೇ ಸ್ವಾತಂತ್ರ್ಯ ದಿನವನ್ನು ಅಚರಣೆ ಮಾಡಲಿದೆ. ಇದಕ್ಕಾಗಿ ಕೆಂಪುಕೋಟೆ ಸೇರಿದಂತೆ ದೇಶದಾದ್ಯಂತ ಹಲವು ಸಿದ್ಧತೆಗಳನ್ನು ಮಾಡಲಾಗಿದೆ. ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಈ ಬಾರಿ ಎಂದಿನಂತೆ ಜನಸೇರಿ ಸ್ವಾತಂತ್ರೋತ್ಸವವನ್ನು ಅಚರಣೆ ಮಾಡುವಂತಿಲ್ಲ. ಆದರೂ ಎಲ್ಲಾ ಕಡೆ ಧ್ವಜಾರೋಹಣ ನಡೆಯಲಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಅವರ ಭಾಷಣ ಪ್ರಸಾರವಾಗಲಿದೆ. ದೂರದರ್ಶನ, ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ಕಡೆಯೂ ಅವರ ಭಾಷಣ ಪ್ರಸಾರವಾಗಲಿದೆ. ಹಿಂದಿ ಮತ್ತು ಇಂಗ್ಲೀಷ್ ಎರಡರಲ್ಲೂ ಇರಲಿದೆ.
ವರದಿಗಳ ಪ್ರಕಾರ, ರಾತ್ರಿ 9.30ರ ಬಳಿಕ ಪ್ರಾದೇಶಿಕ ಭಾಷೆಗಳಲ್ಲಿ ರಾಷ್ಟ್ರಪತಿಗಳ ಭಾಷಣವನ್ನು ಮರು ಪ್ರಸಾರ ಮಾಡಲಾಗುತ್ತದೆ. ಆಯಾ ಪ್ರಾದೇಶಿಕ ದೂರದರ್ಶನ ವಾಹಿನಿಗಳಲ್ಲಿ ಆಯಾ ಭಾಷೆಯಲ್ಲಿ ಭಾಷಣ ಪ್ರಸಾರವಾಗಲಿದೆ.
ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.