ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಡಿಮೆ ಆದಾಯ ಹೊಂದಿ ಜೀವನ ನಿರ್ವಹಣೆಗೂ ಕಷ್ಟಪಡುವಂತಾದ ಜನರಿಗೆ ನೆರವು ನೀಡಿರುವ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅಭಿನಂದನೆ ಸಲ್ಲಿಸಿದ್ದಾರೆ.
ಅವರು ವರ್ಚುವಲ್ ಕಾರ್ಯಕ್ರಮದಲ್ಲಿ ರಾಜ್ಯದ 8 ಜಿಲ್ಲೆಗಳ ಬಿಜೆಪಿ ಕಾರ್ಯಾಲಯ ಮತ್ತು 1 ಮಂಡಲ ಭವನದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಪಕ್ಷದ ಕಾರ್ಯಾಲಯಗಳು ಕೇವಲ ಕಟ್ಟಡವಲ್ಲ. ಬದಲಾಗಿ ಸಂಸ್ಕೃತಿ, ಸಂಸ್ಕಾರಗಳ ಪ್ರತೀಕ. ಬಿಜೆಪಿ ಪಕ್ಷದ ಈ ಸಂಸ್ಕಾರವೇ ಜನರನ್ನು ಪಕ್ಷದತ್ತ ಸೆಳೆಯುವ ಕೆಲಸ ಮಾಡುತ್ತದೆ. ಪಕ್ಷದ ಕಾರ್ಯಕರ್ತ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುತ್ತಾನೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಬಿಜೆಪಿ ಪಕ್ಷದ ಕಛೇರಿ ಇರಬೇಕೆಂಬ ಅಪೇಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ಪಕ್ಷ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿಯೇ ಹೊಂದಿದ್ದರು. ಅಂದಿನಿಂದ ಈವರೆಗೂ ಪಕ್ಷ ಕಟ್ಟುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು , ಪ್ರಸ್ತುತ ದೇಶದಲ್ಲಿ 500 ಕ್ಕೂ ಅಧಿಕ ಕಛೇರಿಗಳಿದ್ದು, ಇನ್ನೂ 300 ರಷ್ಟು ಕಛೇರಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರೊಬ್ಬ ಸಮರ್ಥ ನಾಯಕ. ದೇಶದ ಆರೋಗ್ಯ ಸಮಸ್ಯೆಯ ಜೊತೆಗೆ ಆರ್ಥಿಕ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿಯೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕೊರೋನಾ ಸಂದರ್ಭವೇ ಸಾಕ್ಷಿ ಎಂದು ನಡ್ಡಾ ಹೇಳಿದ್ದಾರೆ. ಮಾರ್ಚ್ 26 ರಿಂದ ತೊಡಗಿದಂತೆ ಈ ವರೆಗೆ ಪಿಎಂ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ 1.70 ಲಕ್ಷ ಕೋಟಿ ರೂ. ಗಳ ವೆಚ್ಚದಲ್ಲಿ 80 ಕೋಟಿ ಜನರಿಗೆ ಆಹಾರ ಒದಗಿಸುವ ಮೂಲಕ ಈ ಅನಿವಾರ್ಯ ಸಂದರ್ಭದಲ್ಲಿ ಬಡ ಜನರ ಹಸಿವು ನೀಗಿಸಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.