ನವದೆಹಲಿ: ಕೊಡುಗೈ ದಾನಿ ಎನಿಸಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಂದು ಮಹತ್ವಪೂರ್ಣವಾದ ದಾನ ಮಾಡಿದ್ದಾರೆ. ಅಸ್ಸಾಂ ನೆರೆ ಪರಿಹಾರ ಕಾರ್ಯಗಳಿಗೆ ಅವರು ಒಂದು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಅವರ ಈ ಕೊಡುಗೆಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.
“ಅಕ್ಷಯಕುಮಾರ್ ಅವರು ಸದಾ ಅಸ್ಸಾಂ ಜನತೆಯ ಸ್ನೇಹಿತರಾಗಿದ್ದಾರೆ ಮತ್ತು ಅವರು ನೀಡಿದ ಕೊಡುಗೆ ನೆರೆಯಿಂದ ಪೀಡಿತರಾದ ಜನರ ಸಮಸ್ಯೆಗಳನ್ನು ಪರಿಹರಿಸಲು ನೆರವಾಗಲಿದೆ” ಎಂದಿದ್ದಾರೆ.
ಕಳೆದ ವರ್ಷ ಕೂಡ ಅಕ್ಷಯ್ ಕುಮಾರ್ ಅವರು ನೆರೆ ಪರಿಹಾರ ಕಾರ್ಯಕ್ಕೆ ಎರಡು ಕೋಟಿ ರೂಪಾಯಿಗಳನ್ನು ನೀಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Thank you @akshaykumar ji for your kind contribution of ₹1 crore towards Assam flood relief. You have always shown sympathy and support during periods of crisis. As a true friend of Assam, may God shower all blessings to you to carry your glory in the global arena.
— Sarbananda Sonowal (@sarbanandsonwal) August 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.