ನವದೆಹಲಿ: ಭಾರತವನ್ನು ವಿಶ್ವದ ನಿರ್ಮಾಣ ಸಲಕರಣೆಗಳ ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಸ್ವಾವಲಂಬನೆಯ ಉದ್ದೇಶವನ್ನು ಸಾಧಿಸಲು, ಆಮದುಗಳನ್ನು ಕಡಿಮೆ ಮಾಡಬೇಕು ಮತ್ತು ವಿವಿಧ ಘಟಕಗಳ ಉತ್ಪಾದನೆಗೆ ಉತ್ತೇಜನ ನೀಡಬೇಕು ಎಂದಿದ್ದಾರೆ.
ಕೈಗಾರಿಕಾ ಸಮೂಹಗಳು, ತಂತ್ರಜ್ಞಾನ ಕೇಂದ್ರಗಳು, ಸಂಶೋಧನಾ ಪ್ರಯೋಗಾಲಯಗಳು ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಗಳ ಉನ್ನತೀಕರಣವನ್ನು ಅಭಿವೃದ್ಧಿಪಡಿಸುವಂತೆ ಎಸ್ಎಂಇ ಕ್ಷೇತ್ರದ ಎಲ್ಲಾ ಕೈಗಾರಿಕೆಗಳಿಗೆ ಅವರು ಮನವಿ ಮಾಡಿದರು. ಕೋವಿಡ್-19 ಸಾಂಕ್ರಾಮಿಕ ರೋಗವು ನೀಡಿದ ಸಮಸ್ಯೆಗಳ ಸವಾಲುಗಳನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿ ನಿಂತವರನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.
ದೇಶದಲ್ಲಿ ತಂತ್ರಜ್ಞಾನ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದಾಗಿ ಸಚಿವರು ಸಂಬಂಧಪಟ್ಟವರಿಗೆ ಭರವಸೆ ನೀಡಿದರು. ಅಲ್ಲದೇ ಆದ್ಯತೆಯ ಮೇರೆಗೆ ಎಂಎಸ್ಎಂಇ ಬಾಕಿಗಳನ್ನು ಪಾವತಿಸುವಂತೆಯೂ ಅವರು ಬೃಹತ್ ಕೈಗಾರಿಕೆಗಳಿಗೆ ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.