ನವದೆಹಲಿ: ಭಾರತದ ಒಟ್ಟು ಕೊವಿಡ್-19 ಪ್ರಕರಣಗಳ ಚೇತರಿಕೆ ಈಗ ಒಟ್ಟು ಸಕ್ರಿಯ ಪ್ರಕರಣಗಳನ್ನು ಸುಮಾರು 16 ಲಕ್ಷದಷ್ಟು ಮೀರಿಸಿದೆ ಎಂದು ಸರ್ಕಾರ ಹೇಳಿದೆ. ನಿರಂತರವಾಗಿ ಹೆಚ್ಚುತ್ತಿರುವ ಚೇತರಿಕೆಗಳು ದೇಶದ ಸಕ್ರಿಯ ಪ್ರಕರಣಗಳನ್ನು ಕಡಿಮೆ ಮಾಡಿದೆ. ಮರಣ ಪ್ರಮಾಣ ಕೂಡ ಕುಸಿತವನ್ನು ಕಾಣುತ್ತಿರುವುದು ಆಶಾವಾದವನ್ನು ಹೆಚ್ಚಿಸಿದೆ.
ಪ್ರಸ್ತುತ, ಭಾರತದ ಪ್ರಕರಣ ಸಾವಿನ ಪ್ರಮಾಣವು ಶೇಕಡಾ 1.86 ರಷ್ಟಿದೆ, ಇದು ಜಾಗತಿಕವಾಗಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಆಕ್ರಮಣಕಾರಿಯಾಗಿ ಪರೀಕ್ಷೆ, ಸಮಗ್ರವಾಗಿ ಪತ್ತೆಹಚ್ಚುವ ಮತ್ತು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವ ಕೇಂದ್ರದ ನೀತಿಯ ಸಮಗ್ರ ಮತ್ತು ನಿರಂತರ ಪರಿಣಾಮಕಾರಿತ್ವದಿಂದಾಗಿ ಇದು ಸಾಧ್ಯವಾಗಿದೆ ಎಂದು ಸಚಿವಾಲಯ ಹೇಳಿದೆ. ಕೋವಿಡ್ ರೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಚೇತರಿಕೆ ಮತ್ತು ಮರಣ ಪ್ರಮಾಣ ಕಡಿಮೆಯಾಗುತ್ತಿರುವುದು ಭಾರತದ ಶ್ರೇಣೀಕೃತ ಮತ್ತು ಸಕ್ರಿಯ ತಂತ್ರಗಳು ಫಲಿತಾಂಶಗಳನ್ನು ನೀಡುತ್ತಿವೆ ಎಂಬುದನ್ನು ತೋರಿಸುತ್ತವೆ.
ಆರೋಗ್ಯ ಸಚಿವಾಲಯದ ಪ್ರಕಾರ, ನಿರಂತರವಾಗಿ ಹೆಚ್ಚುತ್ತಿರುವ ಚೇತರಿಕೆಗಳು ಭಾರತದಲ್ಲಿ ಕೋವಿಡ್-19 ರೋಗಿಗಳ ಚೇತರಿಕೆಯ ಪ್ರಮಾಣವನ್ನು ಸುಮಾರು 75 ಪ್ರತಿಶತಕ್ಕೆ ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 58 ಸಾವಿರ ಕೋವಿಡ್ ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು ಚೇತರಿಕೆಗಳ ಸಂಖ್ಯೆ 22,80,000 ಕ್ಕಿಂತ ಹೆಚ್ಚಾಗಿದೆ.
ಭಾರತ ಇದುವರೆಗೆ 3 ಕೋಟಿ 50 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಿದೆ. ಕೇಂದ್ರೀಕೃತ ಮತ್ತು ಶ್ರೇಣೀಕೃತ ವಿಧಾನದ ಮೂಲಕ ಕೇಂದ್ರದ ಆಕ್ರಮಣಕಾರಿ ಪರೀಕ್ಷಾ ಕಾರ್ಯತಂತ್ರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮದಿಂದ ಪರೀಕ್ಷೆಯಲ್ಲಿ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ. ದೇಶದಲ್ಲಿ 1,515 ಲ್ಯಾಬ್ಗಳು ಜನರಿಗೆ ಸಮಗ್ರ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.