ನವದೆಹಲಿ: ದೆಹಲಿ ಹಿಂಸಾಚಾರದ ಪಿತೂರಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಯುಎಪಿಎ ಕಾಯ್ದೆ ಅಡಿಯಲ್ಲಿ ಜೆಎನ್ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಸ್ಸಾಂನ ಗುವಾಹಟಿ ಜೈಲಿನಲ್ಲಿರುವ ಶಾರ್ಜಿಲ್ ಇಮಾಮ್ ಅನ್ನು ದೆಹಲಿ ಗಲಭೆಯಲ್ಲಿ ವಹಿಸಿದ ಪಾತ್ರಕ್ಕಾಗಿ ವಿಚಾರಣೆ ನಡೆಸಲು ದೆಹಲಿ ಪೊಲೀಸರ ವಿಶೇಷ ಘಟಕವು ರಾಷ್ಟ್ರ ರಾಜಧಾನಿಗೆ ಕರೆತಂದಿದೆ.
ವರದಿಗಳ ಪ್ರಕಾರ, ದೆಹಲಿ ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಾರ್ಜೀಲ್ ಇಮಾಮ್ ಅನ್ನು ಮತ್ತೆ ರಾಷ್ಟ್ರ ರಾಜಧಾನಿಗೆ ಕರೆತರುವ ಸಲುವಾಗಿ ದೆಹಲಿ ಪೊಲೀಸರು ಶುಕ್ರವಾರ ಅಸ್ಸಾಂಗೆ ತೆರಳಿದ್ದರು.
ಜುಲೈ 21 ರಂದು ದೆಹಲಿ ಪೊಲೀಸರು ಆತನನ್ನು ರಾಷ್ಟ್ರ ರಾಜಧಾನಿಗೆ ಕರೆತರಲು ನಿರ್ಧರಿಸಿದ್ದರು, ಆದರೆ ದೆಹಲಿಗೆ ತೆರಳುವ ಮುನ್ನವೇ ಆತನಿಗೆ ಕೋವಿಡ್-19 ಪಾಸಿಟಿವ್ ಬಂದಿತ್ತು. ಸಿಎಎ ಮತ್ತು ಎನ್ಆರ್ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಮಾಮ್ ಆರೋಪಿ.
ಹಲವಾರು ಸ್ಥಳಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಮಾಮ್ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದ. ಇದಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ದೆಹಲಿ ಪೊಲೀಸರು ಈತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಸೆಕ್ಷನ್ 124 ಎ (ದೇಶದ್ರೋಹ), 153 (ಎ) (ದ್ವೇಷವನ್ನು ಉತ್ತೇಜಿಸುವುದು), 153 (ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) (ದ್ವೇಷವನ್ನು ಉತ್ತೇಜಿಸುವುದು, ವಿವಿಧ ಸಮುದಾಯಗಳ ನಡುವೆ ದ್ವೇಷ, 505 (ವದಂತಿಗಳನ್ನು ಹರಡುವುದು) ಐಪಿಸಿ ಮತ್ತು ವಿಭಾಗದ ಅಡಿಯಲ್ಲಿ 600 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ 1967 ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.