ನವದೆಹಲಿ: ದೇಶದಲ್ಲಿ ಕೋವಿಡ್-19 ಚೇತರಿಕೆ ದರವು ಸುಧಾರಣೆಗೊಳ್ಳುತ್ತಾ ಸಾಗುತ್ತಿದೆ ಮತ್ತು ಪ್ರಸ್ತುತ ಶೇಕಡಾ 76.30 ಕ್ಕೆ ತಲುಪಿದೆ. ನಿರಂತರ ಮತ್ತು ಸಮಯೋಚಿತ ಪರೀಕ್ಷೆ ಹಾಗೂ ಚಿಕಿತ್ಸೆಯ ಪರಿಣಾಮವಾಗಿ ದೇಶದ 24 ಲಕ್ಷ 67 ಸಾವಿರ ಜನರನ್ನು ಈವರೆಗೆ ಕೊರೋನಾವೈರಸ್ನಿಂದ ಯಶಸ್ವಿಯಾಗಿ ಗುಣಪಡಿಸಲಾಗಿದೆ.
ದೇಶದಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡ ಒಟ್ಟು ಜನರ ಸಂಖ್ಯೆ ಸಕ್ರಿಯ ಪ್ರಕರಣಗಳ ಸಂಖ್ಯೆಗಿಂತ ಸುಮಾರು ಮೂರುವರೆ ಪಟ್ಟು ಹೆಚ್ಚಾಗಿದೆ. ಕಳೆದ 25 ದಿನಗಳಲ್ಲಿ ಭಾರತವು ಚೇತರಿಕೆಯಲ್ಲಿ ಶೇಕಡಾ 100 ರಷ್ಟು ಹೆಚ್ಚಳವನ್ನು ದಾಖಲಿಸಿದೆ.
ದೇಶದ ಒಟ್ಟು ಸಕ್ರಿಯ ಕೊರೋನಾ ಪ್ರಕರಣಗಳಲ್ಲಿ ಕೇವಲ ಶೇ.0.29 ರಷ್ಟು ಮಂದಿ ಮಾತ್ರ ವೆಂಟಿಲೇಟರ್ಗಳಲ್ಲಿದ್ದರೆ, ಒಟ್ಟು ರೋಗಿಗಳಲ್ಲಿ ಶೇಕಡಾ 2 ರಷ್ಟು ಜನರು ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಕರಣದ ಸಾವಿನ ಪ್ರಮಾಣವು ಸ್ಥಿರವಾದ ಕುಸಿತವನ್ನು ತೋರಿಸುತ್ತಲೇ ಇದೆ ಮತ್ತು ಈಗ ಅದು ಶೇಕಡಾ 1.84 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 67 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು ಪ್ರಕರಣ 32 ಲಕ್ಷ 34 ಸಾವಿರ 475 ಕ್ಕೆ ತಲುಪಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಕರೋನಾ ಪ್ರಕರಣಗಳ ಸಂಖ್ಯೆ 7 ಲಕ್ಷ 7 ಸಾವಿರ 267. ಒಂದೇ ದಿನದಲ್ಲಿ 1 ಸಾವಿರ 59 ಸಾವುಗಳು ಸಂಭವಿಸಿದೆ. ಇದರಿಂದ ಒಟ್ಟು ಸಾವಿನ ಪ್ರಕರಣ 59 ಸಾವಿರ 449 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.