ಬೆಂಗಳೂರು: ರಾಜ್ಯದ ಆರ್ಥಿಕ ಮಟ್ಟವನ್ನು ಉನ್ನತೀಕರಣಗೊಳಿಸುವ ಸಲುವಾಗಿ ರಾಜ್ಯದಲ್ಲಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ ನೀಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಅವರ ಗೃಹ ಕಛೇರಿಯಲ್ಲಿ ನಡೆದ ಇಂಡಿಯನ್ ಛೇಂಬರ್ಸ್ ಆಫ್ ಕಾಮರ್ಸ್ನ ‘ಇಂಡೋ-ಜಪಾನಿಸ್ ಬ್ಯುಸಿನೆಸ್ ಫೋರಂ’ ಸಭೆಯಲ್ಲಿ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ಅವರು ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಹೂಡಿಕೆ ಹೇಗೆ ಸೂಕ್ತ ಎಂಬುದರ ಕುರಿತಾಗಿಯೂ ಸಿಎಂ ಜಪಾನ್ನ ನಿಯೋಗಕ್ಕೆ ಮಾಹಿತಿ ನೀಡಿದರು. ಜೊತೆಗೆ ರಾಜ್ಯದಲ್ಲಿ ನೇರ ಹೂಡಿಕೆ ಬೇಕಾದ ಯಾವುದೇ ರೀತಿಯ ನೆರವಿಗೂ ಸರ್ಕಾರ ಸಿದ್ಧವಾಗಿದ್ದು, ಇದರ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿದರು.
ತುಮಕೂರಿನ ವಸಂತನರಸಾಪುರದಲ್ಲಿ ಜಪಾನ್ ಕಂಪೆನಿಗಳ ಅನುಕೂಲಕ್ಕಾಗಿ 519.55 ಎಕರೆ ಪ್ರದೇಶದಲ್ಲಿ ಟೌನ್ಶಿಪ್ ಅನ್ನು ಆರಂಭ ಮಾಡಲಾಗಿದೆ. ಇಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡಲಾಗಿದೆ. ಇದರ ಅನುಕೂಲ ಪಡೆದುಕೊಳ್ಳುವಂತೆಯೂ ಜಪಾನಿ ನಿಯೋಗಕ್ಕೆ ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ವಿದೇಶಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. 2020 ಮಾರ್ಚ್ ಸಂದರ್ಭ ವಿದೇಶಿ ನೇರ ಹೂಡಿಕೆಗಳ ವಿಚಾರದಲ್ಲಿ ಕರ್ನಾಟಕ2 ನೇ ಸ್ಥಾನದಲ್ಲಿತ್ತು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.