ನವದೆಹಲಿ: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ದೇಶದ ಶ್ರೇಣಿ- II ಪಟ್ಟಣಗಳ ಮೇಲೆ ವಿಶೇಷ ಗಮನಹರಿಸಿ ಸ್ಟಾರ್ಟ್ಅಪ್ ಮತ್ತು ಸಾಫ್ಟ್ವೇರ್ ಉತ್ಪನ್ನಗಳನ್ನು ಮತ್ತಷ್ಟು ಹೆಚ್ಚಿಸಲು “ಚುನೌತಿ” – ನೆಕ್ಸ್ಟ್ ಜನರೇಷನ್ ಸ್ಟಾರ್ಟ್ಅಪ್ ಚಾಲೆಂಜ್ ಸ್ಪರ್ಧೆಯನ್ನು ಪ್ರಾರಂಭಿಸಿದ್ದಾರೆ.
ಸ್ಟಾರ್ಟ್ಅಪ್ ಉಪಕ್ರಮಕ್ಕಾಗಿ ಸರ್ಕಾರವು ಮೂರು ವರ್ಷಗಳ ಅವಧಿಯಲ್ಲಿ 95 ಕೋಟಿ ರೂಪಾಯಿಗಳ ಬಜೆಟ್ ಅನ್ನು ನಿಗದಿಪಡಿಸಿದೆ. ನಿಗದಿತ ಪ್ರದೇಶಗಳಲ್ಲಿ ಕೆಲಸ ಮಾಡುವ ಸುಮಾರು ಮುನ್ನೂರು ಸ್ಟಾರ್ಟ್ಅಪ್ಗಳನ್ನು ಗುರುತಿಸುವುದು ಮತ್ತು ಅವುಗಳಿಗೆ 25 ಲಕ್ಷ ರೂಪಾಯಿಗಳ ಸೀಡ್ ಫಂಡ್ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಗುರಿ ಹೊಂದಿದೆ.
ಈ ಚಾಲೆಂಜ್ ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಎಜು ಟೆಕ್, ಅಗ್ರಿ ಟೆಕ್ ಮತ್ತು ಜನಸಾಮಾನ್ಯರಿಗೆ ಫಿನ್ಟೆಕ್ ಪರಿಹಾರಗಳು, ಸಪ್ಲೈ ಚೈನ್ ಮತ್ತು ಲಾಜಿಸ್ಟಿಕ್ ಮ್ಯಾನೇಜ್ಮೆಂಟ್, ಇನ್ಫ್ರಾಸ್ಟ್ರಕ್ಚರ್, ಮೆಡಿಕಲ್ ಹೆಲ್ತ್ಕೇರ್ ಮತ್ತು ಉದ್ಯೋಗಗಳು ಮತ್ತು ಸ್ಕಿಲ್ಲಿಂಗ್ ಸೇರಿದಂತೆ ಕೆಲಸದ ಕ್ಷೇತ್ರಗಳಲ್ಲಿ ಸ್ಟಾರ್ಟ್ಅಪ್ಗಳನ್ನು ಆಹ್ವಾನಿಸುತ್ತದೆ.
ಚುನೌತಿ ಮೂಲಕ ಆಯ್ಕೆ ಮಾಡಲಾದ ಸ್ಟಾರ್ಟ್ಅಪ್ಗಳಿಗೆ ಸರ್ಕಾರದಿಂದ ವಿವಿಧ ಬೆಂಬಲ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ರವಿಶಂಕರ್ ಪ್ರಸಾದ್ ಅವರು, ಭಾರತದ ಯುವ, ಪ್ರತಿಭಾವಂತ ನಾವೀನ್ಯಕಾರರು ಮುಂದೆ ಬಂದು ಸರ್ಕಾರದ ಚುನೌತಿ ಸವಾಲಿನ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ಹೊಸ ಸಾಫ್ಟ್ವೇರ್ ಉತ್ಪನ್ನಗಳು ಮತ್ತು ಅಪ್ಲಿಕೇಶನ್ಗಳನ್ನು ರಚಿಸಬೇಕು ಎಂದು ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.