ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ 2020 ಅನ್ನು ವರ್ಚುವಲ್ ಆಗಿ ಪ್ರದಾನ ಮಾಡಿದರು.
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ತೆನ್ಜಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿ ಮತ್ತು ರಾಷ್ಟ್ರೀಯ ಖೇಲ್ ಪ್ರೊತ್ಸಾಹನ್ ಪುರಸ್ಕಾರ್ ಅನ್ನು ಅವರು ಪ್ರದಾನ ಮಾಡಿದರು.
ನವದೆಹಲಿಯ ವಿಜ್ಞಾನ ಭವನದಿಂದ ನಡೆದ ಸಮಾರಂಭದಲ್ಲಿ ಕ್ರೀಡಾ ಸಚಿವ ಕಿರೆನ್ ರಿಜ್ಜು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು.
ದೇಶಾದ್ಯಂತದ ವಿವಿಧ ಸ್ಥಳಗಳಿಂದ, ಬೆಂಗಳೂರು, ಪುಣೆ, ಸೋನೆಪತ್, ಚಂಡೀಗಢ, ಕೋಲ್ಕತಾ, ಲಕ್ನೋ, ದೆಹಲಿ, ಮುಂಬೈ, ಭೋಪಾಲ್, ಹೈದರಾಬಾದ್ ಮತ್ತು ಇಟಾನಗರದಿಂದ ಈ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರು ವರ್ಚುವಲ್ ಆಗಿ ಭಾಗವಹಿಸಿದ್ದರು. ಸಮಾರಂಭವನ್ನು ಎಐಆರ್ ನ್ಯೂಸ್ ಮತ್ತು ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲಾಯಿತು.
ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವರ್ಚುವಲ್ ಅಗಿ ನಡೆಸಲಾಗಿದೆ.
ಸಮಾರಂಭದ ಮೊದಲು, ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಪ್ರತಿಮೆಗೆ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಪುಷ್ಪ ನಮನ ಸಲ್ಲಿಸಿದರು.
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಬಹುಮಾನದ ಮೊತ್ತವನ್ನು ಹಿಂದಿನ 7.5 ಲಕ್ಷ ರೂಪಾಯಿಯಿಂದ 25 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಅರ್ಜುನ ಪ್ರಶಸ್ತಿಯನ್ನು 5 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 5 ಲಕ್ಷ ರೂಪಾಯಿಗಳನ್ನು ಹೊಂದಿದ್ದ ದ್ರೋಣಾಚಾರ್ಯ (ಜೀವಮಾನ) ಪ್ರಶಸ್ತಿ ಈಗ 15 ಲಕ್ಷ ರೂಪಾಯಿಗಳನ್ನು ನಗದು ಬಹುಮಾನವಾಗಿ ಹೊಂದಿದೆ. ಧ್ಯಾನ್ಚಂದ್ ಪ್ರಶಸ್ತಿ ಪುರಸ್ಕೃತರಿಗೆ 5 ಲಕ್ಷ ರೂಪಾಯಿಗಳ ಬದಲು 10 ಲಕ್ಷ ರೂಪಾಯಿ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.