ಬೆಂಗಳೂರು: ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳ ಎ ಮತ್ತು ಬಿ ಸಮೂಹದ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿದಿವ್ಯಾಂಗ ಅಭ್ಯರ್ಥಿಗಳ ಮೀಸಲಾತಿಯನ್ನು 4% ಗೆ ಏರಿಕೆ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ನಾಗರಿಕ ಸೇವೆಗಳ ಸಾಮಾನ್ಯ ನೇಮಕಾತಿ ನಿಯಮಗಳು – 1977, ಮತ್ತು ಅಂಗವಿಕಲರ ಹಕ್ಕುಗಳ ಕಾಯ್ದೆ -2016ರ ಮೀಸಲಾತಿ ಪ್ರಮಾಣ ಮತ್ತು ಅಂಗವೈಕಲ್ಯ ಪ್ರಮಾಣದ ಕುರಿತಾಗಿರುವ ತಿದ್ದುಪಡಿಗಳನ್ನು ಸೇರಿಸಿ, ಕರ್ನಾಟಕ ಸಿವಿಲ್ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು -2020 ಅನ್ನು ರಾಜ್ಯ ಪತ್ರದಲ್ಲಿ ಪ್ರಕಟ ಮಾಡಲಾಗಿದೆ.
1995 ರ ಆದೇಶದಂತೆ ರಾಜ್ಯದ ಸರ್ಕಾರಿ ಸೇವೆಗಳ ನೇರ ನೇಮಕಾತಿಯಲ್ಲಿ ಮೀಸಲು ಪ್ರಮಾಣ ಮತ್ತು ಅನುಸರಿಸಬೇಕಾದ ರೋಸ್ಟರ್ಗಳನ್ನು ನಿಗದಿ ಮಾಡಲಾಗಿತ್ತು. ಅದಕ್ಕನುಗುಣವಾಗಿ ಸಿ ಮತ್ತು ಡಿ ಸಮೂಹದ ಹುದ್ದೆಗಳಲ್ಲಿ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಂಗ ವೈಕಲ್ಯ ಹೊಂದಿದವರಿಗೆ 5% ಸಣ ಮೀಸಲಾತಿ ಕಲ್ಪಿಸಲಾಗಿತ್ತು. 2005 ರಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಎ ಮತ್ತು ಬಿ ಸಮೂಹದ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಂಗ ವೈಕಲ್ಯ ಹೊಂದಿದವರಿಗೆ 3% ಮೀಸಲಾತಿ ಕಲ್ಪಿಸಲಾಗಿತ್ತು. ಇದೀಗ 3% ದಿಂದ 4% ಗೆ ಏರಿಸಿ ಆದೇಶ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.