ನವದೆಹಲಿ: ಕಳೆದ ಕೆಲ ಸಮಯಗಳಿಂದ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರಾನೌತ್ ಅವರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಗೃಹ ಸಚಿವಾಲಯ ವೈ ಕೆಟಗರಿ ಭದ್ರತೆ ನೀಡಲಿರುವುದಾಗಿ ಮೂಲಗಳು ತಿಳಿಸಿವೆ.
ಶಿವಸೇನೆಯ ಮುಖಂಡ ಸಂಜಯ ರಾನೌತ್ ಮತ್ತು ಮಹಾರಾಷ್ಟ್ರ ಸರ್ಕಾರದ ಮಧ್ಯೆ ನಡೆಯುತ್ತಿರುವ ಜಟಾಪಟಿಯ ನಡುವೆ, ಕಂಗನಾ ರನೌತ್ ಸೆ. 9 ರಂದು ಮುಂಬೈಗೆ ವಾಪಾಸ್ಸಾಗಲಿದ್ದು, ಈ ಕಾರಣದಿಂದ ಅವರಿಗೆ ವೈ ಭದ್ರತೆ ಒದಗಿಸಲಾಗಿರುವುದಾಗಿ ಮೂಲಗಳು ಹೇಳಿವೆ. ಕಂಗನಾ ಕೆಲ ದಿನಗಳ ಹಿಂದೆ ಮುಂಬೈ ನಗರವನ್ನು ಪಿಒಕೆ (ಪಾಕ್ ಒಕ್ಯುಪೈಡ್ ಕಾಶ್ಮೀರ) ಗೆ ಹೋಲಿಸಿದ್ದರು. ಅವರ ಈ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಸರ್ಕಾರ ಮತ್ತು ಶಿವಸೇನೆ ವಿರೋಧ ವ್ಯಕ್ತಪಡಿಸಿತ್ತು.
ಈ ಸಂಬಂಧ ಆಕೆಗೆ ಹಿಮಾಚಲದಿಂದ ಮಹಾರಾಷ್ಟ್ರದ ಮುಂಬೈಗೆ ತೆರಳದಂತೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ, ಆಕೆ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು. ಇದಕ್ಕೆ ಹಿಮಾಚಲ ಪ್ರದೇಶ ಸರ್ಕಾರವೂ ಸಮ್ಮತಿ ಸೂಚಿಸಿತ್ತು. ಈ ಭದ್ರತೆಯಲ್ಲಿ ವಿವಿಐಪಿಗಳಿಗೆ ಕಮಾಂಡೋಗಳು ಸೇರಿದಂತೆ 11 ಮಂದಿ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ಒದಗಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.