ಧಾರವಾಡ: ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜಿಲ್ಲೆಯ ಸಲಕಿನಕೊಪ್ಪ, ಬಾಡ ಗ್ರಾಮಗಳಲ್ಲಿ ವಿದ್ಯಾಗಮ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಕೊಂಚ ಸಮಯ ಕಳೆದರು.
ಈ ಸಂದರ್ಭದಲ್ಲಿ ಅವರು ಮಕ್ಕಳಿಗೆ ಮಗ್ಗಿ ಹೇಳಿಸಿ, ನಾಡಗೀತೆಯನ್ನು ಹಾಡಿಸಿದರು. ಹಾಗೆಯೇ ಕೊರೋನಾ ನಿಯಂತ್ರಣ ಕ್ರಮಗಳ ಬಗೆಗೂ ಮಕ್ಕಳು ಹೊಂದಿರುವ ಅರಿವಿನ ಪರೀಕ್ಷೆಯನ್ನು ನಡೆಸಿದರು. ಅಲ್ಲದೆ ಕೊರೋನಾ ನಿಯಂತ್ರಣ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಂಬಂಧವೂ ಅವರು ಮಕ್ಕಳಿಗೆ ಸೂಚನೆಗಳನ್ನು ನೀಡಿದರು. ಹಾಗೆಯೇ ಶಾಲೆಯನ್ನು ಮತ್ತೆ ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆಯೂ ಅವರು ಮಕ್ಕಳ ಬಳಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೆಲವು ಖಾಸಗಿ ವಿದ್ಯಾಸಂಸ್ಥೆಗಳು ಮಕ್ಕಳಿಂದ ಕೊರೋನಾ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಯಾವುದೇ ಶುಲ್ಕ ಪಡೆಯುವುದಕ್ಕೂ ಅವಕಾಶವಿಲ್ಲ. ಹೀಗೆ ನಿಯಮಗಳನ್ನು ಉಲ್ಲಂಘನೆ ಮಾಡಿ ಹಣ ಪಡೆದರೆ ಕ್ರಮ ಕೈಗೊಳ್ಳುವುದಾಗಿಯೂ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಶಾಲೆಗಳು ಶಿಕ್ಷಕರ ಮತ್ತು ಸಿಬ್ಬಂದಿಗಳ ಹಿತ ಕಾಯಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.