ಬೆಂಗಳೂರು: ಮಾದಕ ದ್ರವ್ಯ ಬಳಕೆಯನ್ನು ತಡೆಗಟ್ಟುವಲ್ಲಿ ನಿರ್ಲಕ್ಷ್ಯ ತೋರುವ ಸಂಸ್ಥೆಗಳ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ. ವಿಶೇಷವಾಗಿ ಶಾಲಾ ಕಾಲೇಜುಗಳು, ಹಾಸ್ಟೆಲ್ ಗಳಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಸರ್ಕಾರದ ಬೇರೆ ಬೇರೆ ಏಜೆನ್ಸಿಗಳು ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಈ ಸಂಬಂಧ ಮಾತನಾಡಿರುವ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು, ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಳ್ಳಲಿದೆ. ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾರಾಟ ಇತ್ಯಾದಿಗಳಲ್ಲಿ ತೊಡಗಿಸಿಕೊಳ್ಳದಂತೆ ಸಂಸ್ಥೆಯ ಆಡಳಿತ ವರ್ಗ, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ಗಮನ ವಹಿಸಬೇಕು. ತಿಳಿ ಹೇಳಬೇಕು. ನಿರ್ಲಕ್ಷ್ಯ ಧೋರಣೆ ತಾಳಿದಲ್ಲಿ ಕಠಿಣ ಕ್ರಮಕ್ಕೆ ತುತ್ತಾಗುವ ಎಚ್ಚರಿಕೆರನ್ನು ನೀಡಿದ್ದಾರೆ. ಈಗಾಗಲೇ ಕೆಲವು ಸಂಸ್ಥೆಗಳ ವಿರುದ್ಧ ಇಂತಹ ಆರೋಪ ಕೇಳಿ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಮಸ್ಯೆ ಪರಿಹಾರಕ್ಕೆ ಮೊದಲ ಹಂತದ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿಯೂ ಮಾದಕ ದ್ರವ್ಯ ವಿರೋಧಿ ಸಮಿತಿಗಳನ್ನು ಆರಂಭಿಸಲು ಚಿಂತನೆ ನಡೆಯುತ್ತಿದೆ. ಇದರಲ್ಲಿ ಸಂಸ್ಥೆಯ ಸಿಬ್ಬಂದಿಗಳ ಜೊತೆಗೆ ಪೊಲೀಸರು, ಜನಪ್ರತಿನಿಧಿಗಳು, ಸಾರ್ವಜನಿಕರು ಭಾಗಿಗಳಾಗಲಿದ್ದಾರೆ. ಈ ಸುತ್ತೋಲೆಯನ್ನು ಶೀಘ್ರದಲ್ಲೇ ಹೊರಡಿಸುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಎಲ್ಲಾ ಶಾಲೆಗಳಿಗೂ ಇದು ಅನ್ವಯವಾಗಲಿದೆ ಎಂದು ಆವರು ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕಾದವರು. ಅವರಿಗೆ ದಾರಿ ತಪ್ಪುವ ಅವಕಾಶವನ್ನು ನೀಡಬಾರದು. ಈ ಹಿನ್ನೆಲೆಯಲ್ಲಿ ಡ್ರಗ್ಸ್ ವಿರುದ್ಧವೂ ಇಲಾಖೆ ಗಂಭೀರ ತನಿಖೆಗೆ ಮುಂದಾಗಿದೆ. ಇದನ್ನು ಮಾರಾಟ, ಸರಬರಾಜು ಮಾಡುವ ಜನರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಆರೋಗ್ಯ ತಜ್ಞ ಡಾ. ಶೇಖರ್ ಪಾಟೀಲ್ ಅವರೂ ಮಾತನಾಡಿದ್ದು, ಒತ್ತಡ, ಖಿನ್ನತೆ ಮೊದಲಾದ ಅಂಶಗಳು ಮಕ್ಕಳನ್ನು ಮಾದಕ ದ್ರವ್ಯಗಳಿಗೆ ದಾಸರನ್ನಾಗಿ ಮಾಡುತ್ತಿವೆ. ಮಕ್ಕಳಲ್ಲಿ ಅಸಹಜ ನಡವಳಿಕೆ ಕಂಡಾಗ ಗಮನಿಸಿ ತಿದ್ದುವ ಕೆಲಸವಾಗಬೇಕು. ಡ್ರಗ್ಸ್ ವಿರುದ್ಧ ಎಚ್ಚರಿಕೆ ಮೂಡಿಸುವ ಕೆಲಸ ವಿದ್ಯಾಸಂಸ್ಥೆಗಳಿಂದಾಗಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.