ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ವೇದಿಕೆ, ಭಾರತೀಯ ಮೋಟಾರ್ ಸೈಕಲ್ ಮತ್ತು ಓಕ್ವುಡ್ ಪ್ರೀಮಿಯರ್ ಪ್ರೆಸ್ಟೀಜ್ ವತಿಯಿಂದ ಬೆಂಗಳೂರಿನಿಂದ ಸಾಂಸ್ಕೃತಿಕ ನಗರಿ ಮೈಸೂರಿನವರೆಗೂ ಮೋಟಾರು ಬೈಕ್ ಜಾಥಾ ನಡೆಯಿತು.
ಈ ಜಾಥಾವನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಉದ್ಘಾಟಿಸಿದರು. ನಿಗಮದ ನಿರ್ವಾಹಕರು, ಬೆಂಗಳೂರಿನ ಉದ್ಯಮಿಗಳು ಈ ಜಾಥಾದಲ್ಲಿ ಭಾಗವಹಿಸಿದರು. ಸುಮಾರು 143.3 ಕಿಮೀ ದೂರವನ್ನು 3 ಗಂಟೆಗಳಲ್ಲಿ ಕ್ರಮಿಸುವ ಮೂಲಕ ಜಾಥಾ ನಡೆಯಿತು.
ರಾಜ್ಯದ ಪ್ರವಾಸೋದ್ಯಮ ಕೊರೋನಾದಿಂದಾಗಿ ಸಂಕಷ್ಟಕ್ಕೆ ತುತ್ತಾಗಿದೆ. ಆದ್ದರಿಂದ ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿಈ ಜಾಥಾ ನಡೆಯಿತು. ಸ್ವಯಂ ಸುರಕ್ಷತೆ, ಸಾಮಾಜಿಕ ಅಂತರದ ಮೂಲಕ ಜನರು ಪ್ರವಾಸಗಳನ್ನು ಕೈಗೊಳ್ಳಬಹುದಾಗಿದೆ ಎಂದು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.