ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದಲ್ಲಿ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಪೈಕಿ ನಾಲ್ಕು ಯೋಜನೆಗಳು ನೀರು ಸರಬರಾಜಿಗೆ ಸಂಬಂಧಿಸಿವೆ, ಎರಡು ಒಳಚರಂಡಿ ಸಂಸ್ಕರಣೆಗೆ ಮತ್ತು ಒಂದು ನದಿ ತಟದ ಅಭಿವೃದ್ಧಿಗೆ ಸಂಬಂಧಿಸಿದೆ. ಈ ಯೋಜನೆಗಳ ಒಟ್ಟು ವೆಚ್ಚ 541 ಕೋಟಿ ರೂ. ಈ ಯೋಜನೆಗಳ ಅನುಷ್ಠಾನವನ್ನು ಬಿಹಾರದ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯಡಿ BUIDCO ಕೈಗೆತ್ತಿಕೊಂಡಿದೆ.
ನಮಾಮಿ ಗಂಗೆ ಯೋಜನೆಯಡಿಯಲ್ಲಿ ಪಾಟ್ನಾ ಮಹಾನಗರ ಪಾಲಿಕೆಯ ಬಿಯೂರ್ ಮತ್ತು ಕರ್ಮಲಿಚಕ್ ನಲ್ಲಿ ನಿರ್ಮಿಸಲಾದ ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಪ್ರಧಾನಿ ಉದ್ಘಾಟಿಸಿದರು.
ಸಿವಾನ್ ಪುರಸಭೆ ಮತ್ತು ಚಾಪ್ರಾ ನಗರಸಭೆಗಳಲ್ಲಿ ಅಮೃತ್ ಮಿಷನ್ ಅಡಿಯಲ್ಲಿ ನಿರ್ಮಿಸಲಾದ ನೀರು ಸರಬರಾಜು ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿದರು. ಈ ಎರಡೂ ಯೋಜನೆಗಳು ಸ್ಥಳೀಯರಿಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತದೆ
ಅಮೃತ್ ಮಿಷನ್ ಅಡಿಯಲ್ಲಿ ಮುಂಗೇರ್ ನೀರು ಸರಬರಾಜು ಯೋಜನೆಗೆ ಪ್ರಧಾನಿಯವರು ಶಿಲಾನ್ಯಾಸ ನೆರವೇರಿಸಿದರು. ಮುಂಗೇರ್ ಮುನ್ಸಿಪಲ್ ಕಾರ್ಪೊರೇಶನ್ನ ನಿವಾಸಿಗಳಿಗೆ ಪೈಪ್ಲೈನ್ಗಳ ಮೂಲಕ ಶುದ್ಧ ನೀರು ಪಡೆಯಲು ಈ ಯೋಜನೆ ಸಹಾಯ ಮಾಡುತ್ತದೆ. ಅಮೃತ್ ಮಿಷನ್ ಅಡಿಯಲ್ಲಿ ಜಮಾಲ್ಪುರ್ ನೀರು ಸರಬರಾಜು ಯೋಜನೆಗೂ ಅಡಿಪಾಯ ಹಾಕಲಾಗಿದೆ.
ನಮಾಮಿ ಗಂಗೆ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಮುಜಾಫರ್ ಪುರ್ ನದಿ ತಟದ ಅಭಿವೃದ್ಧಿ ಯೋಜನೆಗೆ ಪ್ರಧಾನಿಯವರು ಶಿಲಾನ್ಯಾಸ ಮಾಡಿದ್ದಾರೆ. ಯೋಜನೆಯಡಿ ಮುಜಾಫರ್ಪುರದ ಮೂರು ಘಾಟ್ಗಳನ್ನು (ಪೂರ್ವಿ ಅಖಾಡ ಘಾಟ್, ಸೀಧಿ ಘಾಟ್ ಮತ್ತು ಚಂದ್ವಾರ ಘಾಟ್) ಅಭಿವೃದ್ಧಿಪಡಿಸಲಾಗುತ್ತಿದೆ. ಶೌಚಾಲಯಗಳು, ಮಾಹಿತಿ ಕಿಯೋಸ್ಕ್, ಉಡುಪು ಬದಲಿಸುವ ಕೊಠಡಿಗಳು, ಪಾದಚಾರಿ ಮಾರ್ಗ, ವಾಚ್ ಟವರ್ ಮುಂತಾದ ಮೂಲ ಸೌಲಭ್ಯಗಳನ್ನು ಲಭ್ಯಗೊಳಿಸಲಾಗಿದೆ. ಈ ಘಟ್ಟಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮತ್ತು ಸಾಕಷ್ಟು ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ನದಿ ತಟದ ಅಭಿವೃದ್ಧಿಯು ಪ್ರವಾಸೋದ್ಯಮವನ್ನು ವೃದ್ಧಿಸುತ್ತದೆ ಮತ್ತು ಭವಿಷ್ಯದಲ್ಲಿ ಇದನ್ನು ಆಕರ್ಷಣೀಯ ಕೇಂದ್ರವನ್ನಾಗಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.