ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 2018-19ನೇ ಸಾಲಿನ ಎನ್ಎಸ್ಎಸ್ (ರಾಷ್ಟ್ರೀಯ ಸೇವಾ ಯೋಜನೆ) ಪ್ರಶಸ್ತಿಗಳನ್ನು ವರ್ಚುವಲ್ ಆಗಿ ಇಂದು ಪ್ರದಾನ ಮಾಡಿದರು.
2018-19ನೇ ಸಾಲಿನ ಎನ್ಎಸ್ಎಸ್ ಪ್ರಶಸ್ತಿಯನ್ನು ವಿಶ್ವವಿದ್ಯಾಲಯ, ಎನ್ಎಸ್ಎಸ್ ಘಟಕಗಳು ಮತ್ತು ಅದರ ಕಾರ್ಯಕ್ರಮ ಅಧಿಕಾರಿಗಳು ಮತ್ತು ಎನ್ಎಸ್ಎಸ್ ಸ್ವಯಂಸೇವಕರಂತಹ ಮೂರು ವಿಭಿನ್ನ ವಿಭಾಗಗಳಲ್ಲಿ 42 ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಕಿರೆನ್ ರಿಜ್ಜು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, “ರಾಷ್ಟ್ರೀಯ ಸೇವಾ ಯೋಜನೆಯು ಸೇವೆಯ ಮೂಲಕ ಶಿಕ್ಷಣದ ಗುರಿಯನ್ನು ಹೊಂದಿದೆ. ಯುವ ಸ್ವಯಂಸೇವಕರ ವ್ಯಕ್ತಿತ್ವ ನಿರ್ಮಾಣವನ್ನು ಸೇವೆಯ ಮೂಲಕ ಮಾಡಲಾಗುತ್ತದೆ ಮತ್ತು ಈ ಯೋಜನೆಯ ಧ್ಯೇಯವಾಕ್ಯವು ‘ನಾನಲ್ಲ, ಆದರೆ ನೀನು’ ಎಂಬುದಾಗಿದೆ” ಎಂದಿದ್ದಾರೆ.
ಅನೇಕ ತಾಂತ್ರಿಕ ಸಂಸ್ಥೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಸುಮಾರು 40 ಲಕ್ಷ ಯುವ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಗೆ ಸೇರ್ಪಡೆಗೊಳ್ಳುವ ಮೂಲಕ ಸಮಾಜ ಮತ್ತು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಕೋವಿಂದ್ ಹೇಳಿದರು. ಈ ಯೋಜನೆಯ ಮೂಲಕ ಈವರೆಗೆ ಸುಮಾರು ನಾಲ್ಕು ಕೋಟಿ ಸ್ವಯಂಸೇವಕರು ರಾಷ್ಟ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು.
ಜಾಗತಿಕ ಸಾಂಕ್ರಾಮಿಕ ಕೋವಿಡ್-19 ವಿರುದ್ಧದ ಹೋರಾಟದಲ್ಲಿ, ಎನ್ಎಸ್ಎಸ್ ಸ್ವಯಂಸೇವಕರು ಸಾಮಾಜಿಕ ಅಂತರ ಮತ್ತು ಮುಖಗವಸು ಬಳಕೆಯ ಬಗ್ಗೆ ಜಾಗೃತಿ ಮೂಡಿಸಿದ್ದಾರೆ ಎಂದು ರಾಷ್ಟ್ರಪತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.