ನವದೆಹಲಿ: ಪಿಎಂ ಸ್ಟ್ರೀಟ್ ವೆಂಡರ್ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ ಈವರೆಗೆ 15 ಲಕ್ಷಕ್ಕೂ ಹೆಚ್ಚು ಸಾಲದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 5.5 ಲಕ್ಷಕ್ಕೂ ಹೆಚ್ಚು ಸಾಲಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸುಮಾರು 2 ಲಕ್ಷ ಸಾಲಗಳನ್ನು ವಿತರಿಸಲಾಗಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್-19 ಲಾಕ್ಡೌನ್ಗಳ ನಂತರ ವ್ಯವಹಾರಗಳನ್ನು ಪುನರಾರಂಭಿಸಲು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ಆಧಾರವಿಲ್ಲದೆ ಮುಕ್ತ ಕಾರ್ಯ ಬಂಡವಾಳ ಸಾಲವನ್ನು ಒದಗಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪಿಎಂ ಸ್ವನಿಧಿ ಯೋಜನೆಯನ್ನು ಜಾರಿಗೊಳಿಸಿದೆ.
“ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಸಾಲದಾತರಿಗೆ ಕಾರ್ಯಾಚರಣೆಯ ಸುಲಭತೆಯನ್ನು ಒದಗಿಸಲು, ಅರ್ಜಿಗಳನ್ನು ನೇರವಾಗಿ ಬ್ಯಾಂಕ್ ಶಾಖೆಗಳಿಗೆ ನೀಡಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಯು ಮಂಜೂರಾದ ಸಾಲಗಳ ಸಂಖ್ಯೆ ವೃದ್ಧಿಸಲು ಉತ್ತೇಜನ ನೀಡುತ್ತದೆ ಮತ್ತು ಸಾಲ ವಿತರಣೆಯ ಸಮಯವನ್ನು ತೀವ್ರವಾಗಿ ಕಡಿತಗೊಳಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ಈ ಪ್ರಕ್ರಿಯೆಗೆ ಅನುಕೂಲವಾಗುವಂತೆ ಸಾಫ್ಟ್ವೇರ್ ಅನ್ನು ಅಭಿವೃದ್ಧಿಪಡಿಸಲಾಗಿದೆ, ಇದನ್ನು 11 ಸೆಪ್ಟೆಂಬರ್ 2020 ರಂದು ಕಾರ್ಯರೂಪಕ್ಕೆ ತರಲಾಗಿದೆ. ಈ ಸಾಫ್ಟ್ವೇರ್ ಬಳಸಿ ಸುಮಾರು 3 ಲಕ್ಷ ಅರ್ಜಿಗಳನ್ನು ಬ್ಯಾಂಕುಗಳಿಗೆ ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.