ಬೆಂಗಳೂರು: ರಾಜ್ಯದ ವಿಧಾನ ಪರಿಷತ್ನ ನಾಲ್ಕು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಿದೆ.
ಅಕ್ಟೋಬರ್ ತಿಂಗಳ 28 ನೇ ದಿನಾಂಕದಂದು ಈ ಚುನಾವಣೆ ನಡೆಸುವುದಾಗಿಯೂ ಆಯೋಗ ಮಾಹಿತಿ ನೀಡಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆಯನ್ನು ಘೋಷಿಸಿ ಚು. ಆಯೋಗ ಆದೇಶ ಹೊರಡಿಸಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಚುನಾವಣೆ ನಡೆಯಲಿದೆ. ಅಕ್ಟೋಬರ್1 ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅ. 9 ರಂದು ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ, ಅ. 12 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರಲಿದೆ ಎಂದೂ ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.
ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಫಲಿತಾಂಶ ಹೊರಬೀಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.