ಬೆಂಗಳೂರು: ನಗರದ ವೈಟ್ಫೀಲ್ಡ್ನಲ್ಲಿ ಯೂರೋಫಿನ್ಸ್ ಕ್ಲಿನಿಕಲ್ ಜೆನೆಟಿಕ್ ಇಂಡಿಯಾ ಸಂಸ್ಥೆಯ ಕೊರೋನಾ ಟೆಸ್ಟ್ ಲ್ಯಾಬ್ ಅನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೊರೋನಾ ಪರೀಕ್ಷಾ ಪ್ರಯೋಗಾಲಯಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಕೆಲವೇ ದಿನಗಳಲ್ಲಿ ಟೆಂಡರ್ ಕರೆಯಲಾಗುತ್ತದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೋನಾ ಪರೀಕ್ಷೆಗಳನ್ನು ಹೆಚ್ಚೆಚ್ಚು ನಡೆಸುವಂತೆ ಪ್ರಧಾನಿ ಮೋದಿ ಅವರು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಮೂಲಸೌಕರ್ಯಗಳ ಜೊತೆಗೆ ಟೆಸ್ಟಿಂಗ್ ಲ್ಯಾಬ್ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಬಯಸುತ್ತಿರುವ ಸರ್ಕಾರ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಲಿದೆ. ರಾಜ್ಯ ಈಗಾಗಲೇ ಕೇವಲ ಆರು ತಿಂಗಳಿನಲ್ಲಿಯೇ ರಾಜ್ಯದಲ್ಲಿ 144 ಕೊರೋನಾ ಟೆಸ್ಟಿಂಗ್ ಲ್ಯಾಬ್ಗಳನ್ನು ಆರಂಭಿಸಿತ್ತು. ಈಗ 145 ನೇ ಲ್ಯಾಬ್ ಆರಂಭವಾಗಿದೆ. ಇಲ್ಲಿ ದಿನಕ್ಕೆ 5 ಸಾವಿರ ಜನರಿಗೆ ಕೊರೋನಾ ಟೆಸ್ಟ್ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ಸಂಸ್ಥೆಗೆ ಒದಗಿಸಿ ಕೊಡಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಜನರು ಈ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಿಲ್ಲ. ಇದರಿಂದ ಸೋಂಕು ವ್ಯಾಪಕವಾಗಿ ಹರಡುವಂತಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಈಗಾಗಲೇ ಕೊರೋನಾ ಸಾವಿನ ಪ್ರಮಾಣ ಇಳಿಯುವಂತೆ ಮಾಡಿದೆ. ಇನ್ನು ದಿನಕ್ಕೆ ರಾಜ್ಯದಲ್ಲಿ 1.5 ಲಕ್ಷ ಕೊರೋನಾ ಮಾದರಿ ಪರೀಕ್ಷೆಗಳನ್ನು ನಡೆಸಲು ಪೂರಕ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.